social_icon

ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

Published: 06th June 2023 10:44 AM  |   Last Updated: 06th June 2023 10:44 AM   |  A+A-


Karnataka Deputy CM G Parameshwara (File Photo | EPS)

ಡಾ. ಜಿ. ಪರಮೇಶ್ವರ

Posted By : Ramyashree GN
Source : IANS

ಬೆಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

ಪರಮೇಶ್ವರ್ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಎರಡು ದಿನಗಳ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡುವ ಮೊದಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಕೇಂದ್ರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಬಳಿಕ ಮಂಗಳೂರು ಪೊಲೀಸ್ ಕಮಿಷನರೇಟ್‌ನಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನಂತರ ನೆರೆ ಜಿಲ್ಲೆ ಉಡುಪಿಗೆ ಆಗಮಿಸಿ, ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಕರಾವಳಿ ಪ್ರದೇಶವನ್ನು ಬಿಜೆಪಿಯ ಭದ್ರಕೋಟೆ ಮತ್ತು ಹಿಂದುತ್ವದ ಪ್ರಯೋಗಶಾಲೆ ಎಂದೇ ಪರಿಗಣಿಸಲಾಗಿದೆ. ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ, ಗೋ ರಕ್ಷಣೆ, ಲವ್ ಜಿಹಾದ್, ಚರ್ಚ್‌ಗಳ ಮೇಲಿನ ದಾಳಿ ಮತ್ತು ಭಯೋತ್ಪಾದನೆಯ ಹಲವು ಪ್ರಕರಣಗಳು ವರದಿಯಾಗಿವೆ. ಈ ಪ್ರದೇಶವು ಆಗಾಗ್ಗೆ ಕೋಮು ಉದ್ವಿಗ್ನತೆಗೆ ಸಾಕ್ಷಿಯಾಗಿದೆ. ಈ ಪ್ರದೇಶವು ಹಿಂದೂ ಪವಿತ್ರ ಯಾತ್ರಾ ಕೇಂದ್ರಗಳಿಗೆ ಹೆಸರುವಾಸಿಯಾಗಿದೆ.

2013 ಮತ್ತು 2018ರ ನಡುವಿನ ಕಾಂಗ್ರೆಸ್ ಸರ್ಕಾರದ ಹಿಂದಿನ ಆಡಳಿತದಲ್ಲಿ, ಈ ಪ್ರದೇಶವು ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳಿಗೆ ಸಾಕ್ಷಿಯಾಗಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಆರೋಪ ಬಿಜೆಪಿಯವರ ಅಪಪ್ರಚಾರ ಎಂದು ಸಮರ್ಥಿಸಿಕೊಂಡಿದೆ. 2019 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಹಿಜಾಬ್ ಬಿಕ್ಕಟ್ಟು ಕೂಡ ಇಲ್ಲಿಂದಲೇ ಹೊರಹೊಮ್ಮಿತು ಮತ್ತು ಈ ಪ್ರದೇಶವು ಭೀಕರ ಪ್ರತೀಕಾರದ ಹತ್ಯೆಗಳಿಗೆ ಸಾಕ್ಷಿಯಾಯಿತು.

ಆಡಳಿತ ವಿರೋಧಿ ಅಲೆಯ ಹೊರತಾಗಿಯೂ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ಪಕ್ಷವು ಉಡುಪಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಸ್ಥಾನಗಳಲ್ಲಿ ಆರು ಸ್ಥಾನಗಳನ್ನು ಗೆದ್ದುಕೊಂಡಿತು. ಇಲ್ಲಿ ಎರಡು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಸಚಿವ ಪರಮೇಶ್ವರ ಅವರು ಬೆಂಗಳೂರಿಗೆ ಹಿಂದಿರುಗುವ ಮೊದಲು ಮಾರ್ಚ್ 7 ರಂದು ಕೊಲ್ಲೂರಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp