ತುಮಕೂರು ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲು; 30 ಜನರಿಗೆ ಗಾಯ

ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮಾನಿನಕೆರೆ ಗ್ರಾಮದಲ್ಲಿ 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆಸಲಾಗುತ್ತಿತ್ತು. ಜಾತ್ರೆಗೆ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು.

ಹೆಚ್ಚು ಜನರು ಜಾತ್ರೆಗೆ ಸೇರಿದ್ದರಿಂದ ಸ್ಥಳದಲ್ಲಿ ನೂಕು ನುಗ್ಗಲು ಶುರುವಾಗಿದೆ. ಪರಿಣಾಮ 30 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಧೀಗ ಗಾಯಾಳುಗಳನ್ನು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com