social_icon

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!

ಚಿಕ್ಕಮಗಳೂರು ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published: 08th June 2023 03:47 PM  |   Last Updated: 08th June 2023 06:35 PM   |  A+A-


Droupadi Murmu

ದ್ರೌಪದಿ ಮುರ್ಮು

Posted By : Ramyashree GN
Source : IANS

ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ ಎಂಬ ಭಕ್ತೆ ತನಗಾದ ಸಂಕಷ್ಟವನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮಂತಹ ಮಹಿಳೆಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸದ ಸಂಕೇತ. ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

'ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಹಿಂದೂ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಬಾಬಾಬುಡನ್‌ಗಿರಿಯಲ್ಲಿ, ನಾನು ಪ್ರಕೃತಿಯ ಕರೆಗೆ ಹೋಗಬೇಕಾಯಿತು. ಅಲ್ಲಿ ನನಗೆ ಯಾವುದೇ ಶೌಚಾಲಯ ಕಾಣಿಸಲಿಲ್ಲ. ಶೌಚಾಲಯಕ್ಕಾಗಿ ಎಷ್ಟೇ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ' ಎಂದಿದ್ದಾರೆ.

'ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯ ಹುಡುಕಿದೆ. ಕ್ಷಣಕ್ಷಣಕ್ಕೂ ತಡೆಯಲಾರದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಸಹಿಸಲು ಅಸಾಧ್ಯವಾಯಿತು ಮತ್ತು ಅವಮಾನ ಸಹಿಸಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಮೂತ್ರ ವಿಸರ್ಜನೆ ಮಾಡಿದೆ' ಎಂದಿದ್ದಾರೆ.

ಇದನ್ನೂ ಓದಿ: ನಿರ್ವಹಣೆ ಕೊರತೆ; ರಾಜ್ಯದಲ್ಲಿನ ಬಹುತೇಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ: ಸಿಎಂ ಬೊಮ್ಮಾಯಿ

'ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ. ಆದರೆ, ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಪ್ರಕೃತಿಯ ಕರೆಗೆ ನಾವು ಯಾವ ಧರ್ಮದವರು ಎಂಬುದನ್ನು ಮರೆತು ಅದಕ್ಕೆ ಒತ್ತು ನೀಡುತ್ತೇವೆ. ಜಗತ್ತಿನಲ್ಲಿ ಎಲ್ಲಾ ಧರ್ಮದ ಜನರು ಬಳಸುವ ಯಾವುದಾದರು ಸ್ಥಳವಿದೆ ಎಂದಾದರೆ ಅದು ಶೌಚಾಲಯವಾಗಿದೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀವು ಕೂಡ ನನ್ನಂತೆ ಹೆಣ್ಣೇ. ಆದರೆ, ನೀವು ಅಧಿಕಾರದಲ್ಲಿರುವುದರಿಂದ ಮತ್ತು ನಿಮ್ಮ ಸೇವೆ ಮಾಡಲು ಜನರಿರುವುದರಿಂದ ನಾನು ಎದುರಿಸುವ ಸಮಸ್ಯೆಗಳನ್ನು ನೀವು ಎದುರಿಸುವುದಿಲ್ಲ. ಆದರೆ, ಶೌಚಾಲಯ ಇಲ್ಲದಿರುವುದು ನನ್ನಂತಹ ಮಹಿಳೆಯರ ಘನತೆಗೆ ಕುಂದು ತಂದಿದೆ. ಪ್ರಕೃತಿಯ ಕರೆಗೆ ಹಾಜರಾಗುವ ಬಗ್ಗೆ ಸಾಮಾನ್ಯ ಮಹಿಳೆಯ ಒತ್ತಡವನ್ನು ನೀವು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಮಹಿಳೆಯರು ಎದುರಿಸುತ್ತಿರುವ ಕಷ್ಟಗಳು ಮಹಿಳೆಯರಿಗಷ್ಟೇ ತಿಳಿದಿದೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹ ತಲುಪಿದ್ದೇವೆ. ಆದರೆ, ಈ ಯಾತ್ರಾ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ.

'ಭಾರತವು ವಿಶ್ವದಲ್ಲಿ ಮಧುಮೇಹದ ರಾಜಧಾನಿಯಾಗಿದೆ. ಅವರು ಸಾರ್ವಜನಿಕ ಶೌಚಾಲಯಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ನೀವು ಇಲ್ಲಿ ಶೌಚಾಲಯವನ್ನು ನಿರ್ಮಿಸಿದರೆ, ಕರ್ನಾಟಕದ ಜನರು ಮರೆಯುವುದಿಲ್ಲ' ಎಂದಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • ANURADHA ARUN

    ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಸಮಸ್ಯೆಗಳನ್ನು ಬಗೆಹರಿಸುವ ಬದಲಿಗೆ ಇನ್ನೂ ಸಮಸ್ಯೆಗಳನ್ನು ತಂದೊಡ್ಡುತ್ತಿದ್ದಾರೆ. ಒಬ್ಬರು ಮಾಡುವ ಅಭಿವೃದ್ದಿ ಕಾರ್ಯವನ್ನು, ಮತ್ತೊಬ್ಬರು ಸಹಿಸಲಾರರು. ಈಗ ಪಠ್ಯ ಪುಸ್ತಕಗಳ ಸಮಸ್ಯೆ ಶಾಲಾಮಕ್ಕಳಿಗೆ ನುಂಗಲಾರದ ತುತ್ತಾಗಿಲ್ಲವೇ ? ಬಾಬಾಬುಡನ್ ಗಿರಿಯನ್ನು ವಿವಾದಿತ ಸ್ಠಳವನ್ನಾಗಿಯೇ ಇರಿಸುವುದು ಸರ್ಕಾರದ ಉದ್ದೇಶ.
    3 months ago reply
flipboard facebook twitter whatsapp