ದಿನೇಶ್ ಗುಂಡೂರಾವ್.
ದಿನೇಶ್ ಗುಂಡೂರಾವ್.

ಮೋದಿಯವರ ಅಂಧ ಭಕ್ತರೂ 'ಮನ್ ಕಿ ಬಾತ್' ಕೇಳುತ್ತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕೀ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆಂದು ಸಚಿವ ದಿನೇಶ್ ಗುಂಡೂರಾವ್ ಅವರು ವ್ಯಂಗ್ಯವಾಡಿದ್ದಾರೆ.
Published on

ಬೆಂಗಳೂರು: ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕೀ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆಂದು ಸಚಿವ ದಿನೇಶ್ ಗುಂಡೂರಾವ್ ಅವರು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕಿ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ. ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದ ಬಿಟ್ಟು ಹೊಸದೇನಾದರೂ ಹೇಳುವಿರಾ? ಎಂದು ಹೇಳಿದ್ದಾರೆ.

ಮೋದಿಯವರೇ, ನಿಮ್ಮ ಇಂದಿನ ಮನ್ ಕಿ ಬಾತ್ ಬಗ್ಗೆ ಅನೇಕ ನಿರೀಕ್ಷೆಗಳಿವೆ. ಇಂದು ನಿಮ್ಮ ಮನದಾಳದ ಮಾತಿನಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಮಾತಾಡುವಿರೆ? ಮಹಿಳಾ ಕುಸ್ತಿಪಟುಗಳ ಮೇಲೆ ನಿಮ್ಮ ಪಕ್ಷದ ಸಂಸದ ಎಸಗಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತಾಡುವಿರೆ? ಚೀನಾ ಮತ್ತು ಭಾರತದ ಗಡಿ ಸಂಘರ್ಷದ ಬಗ್ಗೆ ದೇಶದ ಜನರೆದುರು ಸತ್ಯ ಮಾತಾಡುವಿರೆ?

ಮೋದಿಯವರೇ, ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ಒಪ್ಪಿ ನಂತರ ನಿರಾಕರಿಸಿದ ಬಗ್ಗೆ  ಮನ್ ಕಿ ಬಾತ್ ‌ನಲ್ಲಿ ಮಾತಾಡುವಿರೆ? ಬಡವರಿಗೆ ಸಿಗಬೇಕಾಗಿದ್ದ  ಅಕ್ಕಿಯನ್ನು ಹೆಂಡ ತಯಾರಿಸಲು ಬೇಕಾದ ಎಥೆನಾಲ್ ಉತ್ಪಾದನೆಗೆ‌ ಕೊಟ್ಟಿದ್ಯಾಕೆ ಎಂಬ ಬಗ್ಗೆ ಮಾತಾಡುವಿರೆ? ನೀವು ಇಲ್ಲಿಯವರೆಗೂ ಕೊಟ್ಟ ಆಶ್ವಾಸನೆಗಳು ಎಷ್ಟು ಈಡೇರಿದೆ ಎಂಬ ಬಗ್ಗೆ ‌ಮಾತಾಡುವಿರೆ?

ನಿಮ್ಮ ಇಂದಿನ ಮನ್ ಕಿ‌ ಬಾತ್ ಸತ್ಯ ಹಾಗೂ ವಾಸ್ತವದ ಅನಾವರಣವಾಗಿರಲಿ. ಸತ್ಯ ಹೇಳುವ ಮೂಲಕ ಈ ಮನ್ ಕಿ ಬಾತ್‌ ವಿಶಿಷ್ಟ ವಿಭಿನ್ನವಾಗಿರಲಿ. ಮೋದಿಯವರೆ ಸತ್ಯ ಮಾತಾಡಲು ಹೃದಯ ಶುದ್ಧಿಯಿರಬೇಕು ಹಾಗೂ ಮನಸ್ಸು ಕಲ್ಮಶ ರಹಿತವಾಗಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಧೈರ್ಯವಿರಬೇಕು.‌ ಇಂದಾದರೂ ನಾವು ನಿಮ್ಮಿಂದ ಸತ್ಯ ನಿರೀಕ್ಷಿಸಬಹುದೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com