social_icon

ಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ; ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ

ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.

Published: 28th June 2023 09:31 AM  |   Last Updated: 28th June 2023 09:31 AM   |  A+A-


Keerthi and gangadhar

ಕೀರ್ತಿ ಮತ್ತು ಗಂಗಾಧರ್

Posted By : Shilpa D
Source : The New Indian Express

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ ಎಂದು ತಿಳಿದುಬಂದಿದೆ.

ಗಂಗಾಧರ್​ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

ಇದನ್ನೂ ಓದಿ: 2019ರ ಪ್ರವಾಹ: ಆತ್ಮಹತ್ಯೆಗೆ ಅನುಮತಿ ಕೋರಿ ದ್ರೌಪದಿ ಮುರ್ಮುಗೆ ನಿರಾಶ್ರಿತ ಮಹಿಳೆ ಪತ್ರ

ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. 

ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ ಧರಣಿ ದೇವಿ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp