ಯಲ್ಲಾಪುರ: ಮದುವೆಗೆ ಸಿಗದ ಹೆಣ್ಣು; ಮನನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ ನಡೆದಿದೆ.
ಮೃತ ಯುವಕ ನಾಗರಾಜ್
ಮೃತ ಯುವಕ ನಾಗರಾಜ್
Updated on

ಯಲ್ಲಾಪುರ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ ನಡೆದಿದೆ.

ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಕೃಷಿ ಮಾಡಿಕೊಂಡಿದ್ದ ಆತ, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎನ್ನಲಾಗಿದೆ.

ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ತುಂಬಾ ಕಷ್ಟವಾಗಿದೆ. ಕೃಷಿ ಮಾಡಿಕೊಂಡಿರುವ ಯುವಕರಿಗಂತೂ ಹೆಣ್ಣು ಕೊಡುವವರೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com