ಆತ್ಮಹತ್ಯೆ ಯತ್ನ
ರಾಜ್ಯ
ಮಂಗಳೂರು: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಪವಾಡಸದೃಶ್ಯ ಓರ್ವ ಬಾಲಕಿ ಪಾರು!
ಇಲ್ಲಿನ ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಮಂಗಳೂರು: ಇಲ್ಲಿನ ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು 33 ವರ್ಷದ ವಿಜಯಾ ಮತ್ತು ಬಾಲಕಿ 4 ವರ್ಷದ ಶೋಭಿತಾ ಮೃತ ದುರ್ದೈವಿಯಾಗಿದ್ದು ಅದೃಷ್ಟವಶಾತ್ 12 ವರ್ಷದ ಯಜ್ಞಾ ನೇಣು ಕುಣಿಕೆಯಿಂದ ಪಾರಾಗಿದ್ದಾಳೆ.
ವಿಜಯಾ ಅವರ ಪತಿ ಆರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಆಕೆ ಉಮೇಶ್ ಎಂಬುವರನ್ನು ಮರು ಮದುವೆಯಾಗಿದ್ದರು. ಆದರೆ ಉಮೇಶ್ ಇತ್ತೀಚೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.
ಆಸರೆಯಾಗಿದ್ದ ಎರಡನೇ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು ಇದರಿಂದ ನೊಂದ ವಿಜಯಾ ತಮ್ಮ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಯಜ್ಞಾ ಕಾಲಿಗೆ ಟೀಪಾಯಿ ಸಿಕ್ಕಿಹಾಕ್ಕೊಂಡಿದ್ದರಿಂದ ಅದರ ಮೇಲೆ ನಿಂತು ಜೀವ ಉಳಿಸಿಕೊಳ್ಳಲು ಜೋರಾಗಿ ಕೂಗಿದಳು.
ಕೂಡಲೇ ಅಲ್ಲಿಗೆ ಬಂದ ಸ್ಥಳೀಯರು ಮೂವರನ್ನು ಕೆಳಗಿಳಿಸಿದರು. ಆದರೆ ಅಷ್ಟರಲ್ಲಾಗಲೇ ವಿಜಯಾ ಮತ್ತು ಶೋಭಿತಾ ಮೃತಪಟ್ಟಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ