ಭರವಸೆಗಳಿಗೆ ಬಗ್ಗೋಲ್ಲ, ಅಧಿಕೃತ ಆದೇಶ ಹೊರಡಿಸದ ಹೊರತು ಮುಷ್ಕರ ಹಿಂಪಡೆಯುವುದಿಲ್ಲ: ಸರ್ಕಾರಿ ನೌಕರರು

ಮುಖ್ಯಮಂತ್ರಿಗಳ ಭರವಸೆಗಳಿಗೆ ಬಗ್ಗುವುದಿಲ್ಲ, ವೇತನ ಹೆಚ್ಚಳ ಕುರಿತು ಅಧಿಕೃತ ಆದೇಶ ಹೊರಡಿಸದ ಹೊರದು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ

ಬೆಂಗಳೂರು: ಮುಖ್ಯಮಂತ್ರಿಗಳ ಭರವಸೆಗಳಿಗೆ ಬಗ್ಗುವುದಿಲ್ಲ, ವೇತನ ಹೆಚ್ಚಳ ಕುರಿತು ಅಧಿಕೃತ ಆದೇಶ ಹೊರಡಿಸದ ಹೊರದು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು, ಸರ್ಕಾರದ ಭರವಸೆಯನ್ನು ನಾವು ಒಪ್ಪುವುದಿಲ್ಲ. ಅಧಿಕೃತ ಆದೇಶ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಸರ್ಕಾರ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಈಗ ಅಧಿಕಾರಿಗಳು ತುರ್ತು ಸಭೆಗೆ ಆಹ್ವಾನ ನೀಡಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com