social_icon

2023-24ನೇ ಸಾಲಿನ ಬಿಬಿಎಂಪಿ ಆಯವ್ಯಯ: 11,158 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಅವರು, ರೂ.11,158 ಸಾವಿರ ಕೋಟಿ ಗಾತ್ರದ ಬಜೆಟ್'ನ್ನು ಮಂಡನೆ ಮಾಡಿದ್ದಾರೆ.

Published: 02nd March 2023 01:29 PM  |   Last Updated: 02nd March 2023 06:38 PM   |  A+A-


BBMP budget

ಬಿಬಿಎಂಪಿ ಬಜೆಟ್

Posted By : Manjula VN
Source : Online Desk

ಬೆಂಗಳೂರು: 2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಅವರು, ರೂ.11,158 ಸಾವಿರ ಕೋಟಿ ಗಾತ್ರದ ಬಜೆಟ್'ನ್ನು ಮಂಡನೆ ಮಾಡಿದ್ದಾರೆ.

ಸರ್.ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ದಲ್ಲಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರ ಉಪಸ್ಥಿತಿಯಲ್ಲಿ ಜಯರಾಮ್ ರಾಯಪುರ ಅವರು ಇಂದು ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಹಣವನ್ನು ತರಿಗೆ ಹಾಗೂ ಅನುದಾನಕ್ಕೆ ಮೀಸಲಿಡಲಾಗಿದೆ.

ಆದಾಯ ಮೂಲಗಳು:
1. ತೆರಿಗೆ ಮತ್ತು ಕರಗಳ ಆದಾಯ – 4,412 ಕೋಟಿ (40%)
2. ತೆರಿಗೆಯೇತರ ಆದಾಯ – 1,331  ಕೋಟಿ (12%)
3. ಭಾರತ ಸರ್ಕಾರ ಅನುದಾನ – 461 ಕೋಟಿ (4%)
4. ಕರ್ನಾಟಕ ಸರ್ಕಾರದ ಅನುದಾನ – 3,632 ಕೋಟಿ (33%)
5. ಅಸಾಧಾರಣ ಆದಾಯ – 800 ಕೋಟಿ (8%)
6. ಚಾಲ್ತಿ ಹೊಣೆಗಾರಿಕೆಗಳು-ಸ್ವೀಕೃತಿಗಳು - 520 ಕೋಟಿ (5%)
ಒಟ್ಟು – 11,15,845.00 (100%)

ಬಜೆಟ್ ಮಂಡಿಸಿದ ಜಯರಾಮ್ ರಾಯಪುರ ಅವರು, ಬೀದಿ ವ್ಯಾಪಾರಿಗಳ ವಲಯಗಳಿಗಾಗಿ 25 ಕೋಟಿ ರೂ. ಹಾಗೂ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕಾಗಿ ಒಟ್ಟು 210 ಕೋಟಿ ರೂ ಘೋಷಿಸಿದರು. ಅಲ್ಲದೆ, ಇದು ಆತ್ಮನಿರ್ಭರ ಆಯವ್ಯಯ ಎಂದು ತಿಳಿಸಿದರು.

ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ಹಾಗೂ ಪ್ರವಾಸಿಗರ ಮನಸೆಳೆಯಲು 50 ಕೋಟಿ ರೂ ಗಳ ವೆಚ್ಚದಲ್ಲಿ 10 ಹೊಸ ಸಿಟಿ ಪ್ಲಾಜಾ ಗಳನ್ನು ನಗರದ ಹಲವು ಜನವಸತಿ ಪ್ರದೇಶಗಳಲ್ಲಿ ನಿರ್ಮಿಸಲಾಗುವುದು. ಈ ಪ್ಲಾಜಾಗಳಲ್ಲಿ ಕಾರಂಜಿ, ಆಟದ ಸ್ಥಳಗಳು, ಆಹಾರ ಮಳಿಗೆಗಳು ಹಾಗೂ ಮುಕ್ತವಾಗಿ ಕುಳಿತು ವಿರಮಿಸುವ ಸೌಲಭ್ಯಗಳು ಇರಲಿವೆ ಎಂದರು.

ಬೆಂಗಳೂರಿನಲ್ಲಿ ಹಲವು ಕೊಳಗೇರಿ ಪ್ರದೇಶಗಳಿದ್ದು, 2023-24ನೇ ವರ್ಷದಲ್ಲಿ 80 ಕೋಟಿ ರೂ ಗಳ ವೆಚ್ಚದಲ್ಲಿ 8 ಕೊಳಗೇರಿ ಪ್ರದೇಶಗಳ ಪುನರ್ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುವುದು. ಹಂತ ಹಂತವಾಗಿ ಬೆಂಗಳೂರಿನ ಎಲ್ಲಾ ಕೊಳಗೇರಿ ಪ್ರದೇಶಗಳ ಪುನರ್ ಅಭಿವೃದ್ಧಿ ಮಾಡಿ ನಗರವನ್ನು ಕೊಳಗೇರಿ ಮುಕ್ತ ಪ್ರದೇಶವನ್ನಾಗಿ ಮಾಡುವ ಯೋಜನೆಯಿದೆ ಎಂದು ಹೇಳಿದರು.

ಇದನ್ನೂ ಓದಿ: ಇಂದು ಬಿಬಿಎಂಪಿ ಬಜೆಟ್: ರಸ್ತೆ ನಿರ್ವಹಣೆ, ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವಂತೆ ನಾಗರೀಕರು, ತಜ್ಞರು ಒತ್ತಾಯ

ಬೆಂಗಳೂರು ನಗರದಲ್ಲಿ 42 ಮೇಲ್ವೇತುವೆ ಮತ್ತು 28 ಕೆಳಸೇತುವೆಗಳಿದ್ದು ಈ ವರ್ಷದಲ್ಲಿ ಮತ್ತೆ 4 ಮೇಲ್ಲೇತುವೆಗಳು ಮತ್ತು 4 ಕೆಳಸೇತುವೆಗಳು ಸೇರ್ಪಡೆಯಾಗಬಹುದಾಗಿದ್ದು, ಪಾದಚಾರಿ ಸುರಂಗ ಮಾರ್ಗ ಸೇರಿದಂತೆ ಈ ಮೇಲೇತುವೆ ಮತ್ತು ಕೆಳಸೇತುವೆಗಳ ನಿರ್ವಹಣೆಗೆ 20 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳ ನಿರ್ವಹಣೆ ಮತ್ತು ಟೆಂಡರ್ ಶೂರ್ ಅಡಿಯಲ್ಲಿ ಮತ್ತು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾಗಿರುವ ರಸ್ತೆಗಳ ನಿರ್ವಹಣೆಗೆ 20 ಕೋಟಿಗಳನ್ನು ಮೀಸಲಿಡಲಾಗಿದೆ.

ಬೆಂಗಳೂರಿನ ರಸ್ತೆಗಳಲ್ಲಿ ಪ್ರಯಾಣ ಮಾಡುವ ಹೆಂಗಸರ ಸೌಲಭ್ಯಕ್ಕೆಂದು 250 ಶೀ-ಟಾಯ್ಲೆಟ್ (ಅವಳ ಸ್ಥಳ) ಗಳನ್ನು 2023-24ನೇ ವರ್ಷದಲ್ಲಿ ನಿರ್ಮಾಣ ಮಾಡಲಾಗುವುದು. ಈ 'ಅವಳ ಸ್ಥಳ'ಗಳಲ್ಲಿ ಟಾಯ್ಲೆಟ್ ಜಾಗ, ಬಟ್ಟೆ ಬದಲಾಯಿಸುವಿಕೆಗೆ ಜಾಗ, ಕೈತೊಳೆಯುವ ಸೌಲಭ್ಯಕ್ಕೆ ಸ್ಥಳ ಹಾಗೂ ಮೊಬೈಲ್ ಜಾರ್ಜಿಂಗ್‌ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದರು.

ತುಮಕೂರು ರಸ್ತೆಯಿಂದ ನಾಯಂಡಹಳ್ಳಿ ಜಂಕ್ಷನ್ ವರೆಗೆ ಸಿಗ್ನಲ್‌ ಮುಕ್ತ ಕಾರಿಡಾರ್‌ಗಾಗಿ 70 ಕೋಟಿ ರೂ, ಗೋಕುಲ ರಸ್ತೆಯ ಮತ್ತಿಕೆರೆ ತಿರುವಿನಲ್ಲಿ ಐ.ಐ.ಎಸ್.ಸಿ. ಒದಗಿಸುತ್ತಿರುವ ಭೂಮಿಯನ್ನು ಬಳಸಿಕೊಂಡು 40 ಕೋಟಿ ರೂ ವೆಚ್ಚದಲ್ಲಿ ಮೇಲ್ವೇತುವೆ ನಿರ್ಮಾಣ, ಮೇಖಿವೃತ್ತ ಕೆಳಸೇತುವೆ ಮೇಲ್ಬಾಗದಲ್ಲಿ ಜಯಮಹಲ್ ರಸ್ತೆಯಲ್ಲಿ 65 ಕೋಟಿ ರೂ ಗಳ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ, ಈಗಾಗಲೇ ಪಾಲಿಕೆಯ ವತಿಯಿಂದ ನಿರಾಶ್ರಿತರಿಗಾಗಿ 48 ರಾತ್ರಿ ತಂಗುದಾಣಗಳನ್ನು ನಡೆಸಲಾಗುತ್ತಿದ್ದು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಟ್ಟು 84 ರಾತ್ರಿ ತಂಗುದಾಣಗಳನ್ನು ನಿರ್ವಹಿಸಬೇಕಾಗಿದ್ದು, 2023-24ನೇ ಆಯವ್ಯಯದಲ್ಲಿ 3 ಕೋಟಿ ರೂ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುತ್ತಿದೆ.

2022-23 ನೇ ವರ್ಷದಲ್ಲಿ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ 10,000 ಲ್ಯಾಪ್ಟಾಪ್‌ಗಳನ್ನು ವಿತರಿಸಲಾಗುತ್ತಿದೆ. 2023-24ರಲ್ಲಿಯೂ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ರೂ.25 ಕೋಟಿ ಒದಗಿಸಲಾಗಿದೆ. 2022-23ರಲ್ಲಿ ಉತ್ತಮ ಬ್ರಾಂಡ್‌ನ 8091 ಹೊಲಿಗೆ ಯಂತ್ರಗಳನ್ನು ಆಯ್ದ ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ. 2023-24 ವರ್ಷದಲ್ಲಿ ಇದೇ ಯೋಜನೆಗೆ 9 ಕೋಟಿ ರೂ ಒದಗಿಸಲಾಗಿದೆ.

2022-23ನೇ ವರ್ಷದಲ್ಲಿ ಪಾಲಿಕೆಯ ಎಲ್ಲಾ ಹಳೆಯ ಕಲ್ಯಾಣ ಕಾರ್ಯಕ್ರಮಗಳನ್ನು ಮತ್ತೆ ಕೈಗೆತ್ತಿಕೊಳ್ಳಲಾಗಿದೆ. ಈ 2022-23ನೇ ವರ್ಷದಲ್ಲಿ 1500 ಒಂಟಿ ಮನೆಗಳ ನಿರ್ಮಾಣಕ್ಕೆ ವಿವಿಧ ವರ್ಗಗಳ ಜನರಿಗೆ ತಲಾ 5 ಲಕ್ಷ ರೂಗಳಂತೆ ನೀಡಲಾಗಿದೆ. 2023-24ನೇ ವರ್ಷದಲ್ಲಿ 2000 .ಒಂಟಿ ಮನೆ ನಿರ್ಮಾಣ ಯೋಜನೆಯ ಅನುಷ್ಠಾನಕ್ಕೆ 100 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ.

2022-23ನೇ ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆಯಲ್ಲಿ 160 ಕೋಟಿ ರೂ ವೆಚ್ಚದಲ್ಲಿ ಪಾಲಿಕೆಯ ಶಾಲೆಗಳ ಕಟ್ಟಡ ನವೀಕರಣ, ಅಗೆಯಲ್ಪಟ್ಟ ರಸ್ತೆಗಳ ಪುನರ್ ನಿರ್ಮಾಣಕ್ಕೆ 300 ಕೋಟಿ ರೂ. ನಿಗದಿ, 345 ಕೋಟಿ ವೆಚ್ಚದಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್​ ನಿರ್ಮಾಣ, 75 ಜಂಕ್ಷನ್​​ಗಳ ಅಭಿವೃದ್ಧಿಗೆ 150 ಕೋಟಿ ರೂಪಾಯಿ ಮೀಸಲು, ಅಗೆಯಲ್ಪಟ್ಟ ರಸ್ತೆಗಳ ಪುನರ್ ನಿರ್ಮಾಣಕ್ಕೆ 300 ಕೋಟಿ ರೂ. ನಿಗದಿ, 1,410 ಕೋಟಿ ವೆಚ್ಚದಲ್ಲಿ 150 ಕಿ.ಮೀ.​​ ರಸ್ತೆಗೆ ವೈಟ್ ಟಾಪಿಂಗ್ ಮಾಡುವುದಾಗಿ ತಿಳಿಸಿದರು.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp