ಶೇ.17ರಷ್ಟು ವೇತನ ಹೆಚ್ಚಳ: ಸಿಎಂ ಬೊಮ್ಮಾಯಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು.
ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸರ್ಕಾರಿ ನೌಕರರು.
ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸರ್ಕಾರಿ ನೌಕರರು.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಅವರ ನೇತೃತ್ವದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಅವರ ಆರ್‌.ಟಿ. ನಗರದ ನಿವಾಸಕ್ಕೆ ತೆರಳಿದ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ಸರ್ಕಾರಿ ನೌಕರರ ಹಿತ ಕಾಯಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com