ಉಡುಪಿ: ಸ್ಕೂಟರ್ ನಲ್ಲಿದ್ದವರ ಮೇಲೆ ಹರಿದ ಟ್ಯಾಂಕರ್; ಸ್ಥಳದಲ್ಲೇ ಇಬ್ಬರ ದುರ್ಮರಣ!

ಮೂಲ್ಕಿ ಸೇತುವೆ ಮೇಲೆ ಸ್ಕೂಟರ್-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಮೂಲ್ಕಿ ಸೇತುವೆ ಮೇಲೆ ಸ್ಕೂಟರ್-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ 61 ವರ್ಷದ ಅಕ್ಬರ್ ಪಾಶ ಹಾಗೂ 46 ವರ್ಷದ ಖತೀಜಾಬಿ ಮೃತ ದುರ್ದೈವಿಗಳು. ದಂಪತಿ ಬೈಕ್ ನಲ್ಲಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಅಪಘಾತ ನಡೆದಿದೆ.

ಟಾರ್ ಹಾಕಲು ಹೆದ್ದಾರಿ ಮೇಲ್ಪದರವನ್ನು ತೆಗೆಯಲಾಗಿತ್ತು. ಹೀಗಾಗಿ ಬೈಕ್ ಸ್ಕಿಡ್ ಆಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದಿದ್ದರು. ಈ ವೇಳೆ ಎದುರುಗಡೆಯಿಂದ ಬರುತ್ತಿದ್ದ ಟ್ಯಾಂಕರ್ ಸವಾರರ ತಲೆ ಮೇಲೆ ಹರಿದಿದ್ದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com