social_icon

ಗಣಿಗಾರಿಕೆ, ಕ್ರಷರ್‌ಗಳ ನಿಯಮ ಸರಳೀಕರಣಕ್ಕೆ ಒತ್ತು: ಸಣ್ಣ ಖನಿಜ ನೀತಿ -2023ಕ್ಕೆ ಸಚಿವ ಸಂಪುಟ ಒಪ್ಪಿಗೆ

ಉಪಖನಿಜ ಕಾನೂನಿಗೆ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಿ, ಕೈಗಾರಿಕಾ ಸ್ನೇಹಿ ನೀತಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

Published: 09th March 2023 12:15 PM  |   Last Updated: 09th March 2023 03:21 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಉಪಖನಿಜ ಕಾನೂನಿಗೆ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಿ, ಕೈಗಾರಿಕಾ ಸ್ನೇಹಿ ನೀತಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಣ್ಣ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಏಕರೂಪದ ನಿಯಮಗಳ ಜಾರಿಗೆ ಒತ್ತು ನೀಡಿ ಈ ನೀತಿಯನ್ನು ರೂಪಿಸಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು, ''ಜಲ್ಲಿ ಕ್ರಷರ್‌ ಮಾಲೀಕರ ಬಹುದಿನಗಳ ಬೇಡಿಕೆಯಂತೆ ನನ್ನ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ಹಲವು ಸುತ್ತಿನ ಸಮಾಲೋಚನೆ ಬಳಿಕ ನೀತಿಯನ್ನು ಸಿದ್ದಪಡಿಸಿದ್ದು, ನಿಯಮಾವಳಿಯಲ್ಲಿ ಸಾಕಷ್ಟು ಸರಳೀಕರಣ ಮಾಡಲಾಗಿದೆ. ಜೊತೆಗೆ, ಗಣಿ ಮಂಜೂರಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ನೀತಿಯು ಉದ್ಯಮ ಸ್ನೇಹಿಯಾಗಿರಲಿದೆ ಎಂದು ಹೇಳಿದರು.

ಗುತ್ತಿಗೆದಾರರು ಪಿಡಬ್ಲ್ಯುಡಿ ಇಲಾಖೆಗೆ ರಾಜಧನವನ್ನು ಪಾವತಿಸಿದರೆ, ನಂತರ ಗಣಿ ಇಲಾಖೆಗೆ ಪಾವತಿಸುವ ಅಗತ್ಯವಿರುವುದಿಲ್ಲ. ಈ ಕಾಯ್ದೆಯು ಹೈಕೋರ್ಟ್ ಆದೇಶವನ್ನು ಅನುಸರಿಸಿ, ಗಣಿಗಾರಿಕೆ ಗುತ್ತಿಗೆಗೆ ಅರ್ಜಿ ಸಲ್ಲಿಸುವವರಿಗೆ ಸಹಾಯ ಮಾಡುತ್ತದೆ. "ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆ ಹಂತದಲ್ಲಿ ರಾಯಲ್ಟಿ ಪಾವತಿಸಲಿದ್ದು, ಕಲ್ಲು ಗಣಿಗಾರಿಕೆ ಹಂತದಲ್ಲೂ ರಾಜಧನ ಕಡ್ಡಾಯವೇ ಎಂಬಂತಹ ಹಲವು ಗೊಂದಲಗಳಿಗೆ ನೀತಿಯಲ್ಲಿ ಪರಿಹಾರ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ: ಸಚಿವ ಹಾಲಪ್ಪ ಆಚಾರ್‌

ಬಳ್ಳಾರಿ, ಚಿತ್ರದುರ್ಗ, ತುಮಕೂರು ಮತ್ತಿತರ ಗಣಿಗಾರಿಕೆ ಬಾಧಿತ ಮೂಲಸೌಕರ್ಯ ಅಭಿವೃದ್ಧಿಗೆ ಸಮಗ್ರ ಗಣಿ ಪರಿಸರ ಪುನಃಶ್ಚೇತನ ಯೋಜನೆಯಡಿ ಲಭ್ಯವಿರುವ ಸುಮಾರು 23,000 ಕೋಟಿ ರೂ.ಗಳನ್ನು ವೆಚ್ಚ ಮಾಡುವ ಸಂಬಂಧದ ಅಧಿಕಾರವನ್ನು 'ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)'ಗೆ ಪ್ರತ್ಯೇಕವಾಗಿ ಯೋಜಿಸುವ ಮಹತ್ವದ ತೀರ್ಮಾನವನ್ನು ಸಂಪುಟ ಕೈಗೊಂಡಿತು.

"ಗಣಿಗಾರಿಕೆಯಿಂದ ಸಂಗ್ರಹವಾಗಿರುವ ರಾಯಲ್ಟಿ, ಸೆಸ್‌, ದಂಡ ಮತ್ತಿತರ ಮೂಲದಲ್ಲಿ ಸಂಗ್ರಹವಾಗಿರುವ 23 ಸಾವಿರ ಕೋಟಿ ರೂ.ಗಳನ್ನು ಶಾಲೆ, ರಸ್ತೆ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಅಭಿವೃದ್ಧಿಗೆ ವಿನಿಯೋಗಿಸಲು ಅವಕಾಶವಿದ್ದು, ಇದರ ಮೇಲ್ವಿಚಾರಣೆಗೆ ನ್ಯಾ. ಸುದರ್ಶನ್‌ ರೆಡ್ಡಿ ನೇತೃತ್ವದಲ್ಲಿ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್‌ ರಚಿಸಿದೆ. ಈ ಸಂಬಂಧದ ಪ್ರಸ್ತಾವನೆಗಳಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಕೆಎಂಇಆರ್‌ಸಿಗೆ ವಹಿಸಲು ನಿರ್ಧರಿಸಲಾಯಿತು ಎಂದು ಮಾಧುಸ್ವಾಮಿ ವಿವರಿಸಿದರು.

''ಒಡಿಶಾ ರಾಜ್ಯದ ಮಾದರಿಯಲ್ಲಿ ಇಂತಹ ತೀರ್ಮಾನ ಕೈಗೊಳ್ಳಲಾಗಿದ್ದು, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಕ್ಕಟ್ಟಿನ ಸಂದರ್ಭಗಳು ಸೃಷ್ಟಿಯಾದರೆ, ಪರಿಹಾರಕ್ಕೆ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳು ಕೆಎಂಇಆರ್‌ಸಿಗೆ ನೆರವಾಗಲಿದ್ದಾರೆ'' ಎಂದು ತಿಳಿಸಿದರು.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp