
ಅಪಘಾತದ ದೃಶ್ಯ
ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತ ದುರ್ದೈವಿಗಳು. ಅಪಘಾತದ ನಂತರ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ!
ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.