
ಸಿಎಂ ಬೊಮ್ಮಾಯಿ
ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸ ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್'ಗಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ 'ಹಿಂಸಾಚಾರ ರಾಜಕೀಯ'ವನ್ನು ಅಳವಡಿಸಿಕೊಂಡಿದೆ: ರಣದೀಪ್ ಸುರ್ಜೇವಾಲಾ
ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಲಾಗಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದು ತಿಳಿಸಿದ್ದರು.