social_icon

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ನಿಲುವಿಗೆ ಹೈಕೋರ್ಟ್‌ ಕಿಡಿ, ಮಧ್ಯಂತರ ತಡೆಯಾಜ್ಞೆ ಮಾರ್ಚ್ 31ರವರೆಗೆ ವಿಸ್ತರಣೆ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್​​ 31ರವರೆಗೆ ವಿಸ್ತರಣೆ ಮಾಡಲಾಗಿದೆ.

Published: 25th March 2023 08:59 AM  |   Last Updated: 25th March 2023 04:03 PM   |  A+A-


DK Shivakumar

ಡಿಕೆ.ಶಿವಕುಮಾರ್

Posted By : Manjula VN
Source :

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್​​ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಸಿಬಿಐ ತನಿಖೆ ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ನಡೆಸಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ಎಚ್ ಜಾಧವ್‌ ಅವರು “ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಮಾಡಿರುವ ಆದೇಶವನ್ನು ಪ್ರಶ್ನಿಸಲಾದ ಮತ್ತೊಂದು ಅರ್ಜಿ ಇನ್ನೊಂದು ಪೀಠದಲ್ಲಿದೆ. ಅದನ್ನೂ ಇದೇ ಪೀಠಕ್ಕೆ ತರಿಸಿಕೊಂಡು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು” ಎಂದು ಕೋರಿದರು. ಈ ಮನವಿಗೆ ನ್ಯಾಯಾಲಯವು ಸಹಮತ ವ್ಯಕ್ತಪಡಿಸಿತು.

ವಿಚಾರಣೆ ವೇಳೆ ಬೇರೊಂದು ಪೀಠದಲ್ಲಿನ ಅರ್ಜಿಯ ಪರವಾಗಿ ಹಾಜರಿದ್ದ ಹಿರಿಯ ವಕೀಲ ಉದಯ ಹೊಳ್ಳ ಅವರು ಇನ್ನೂ ಆ ಪೀಠದಿಂದ ಅರ್ಜಿಯು ಇಲ್ಲಿಗೆ ವರ್ಗಾವಣೆ ಮಾಡಿಲ್ಲ ಎಂಬ ಅಂಶವನ್ನು ನ್ಯಾಯಮೂರ್ತಿಗಳ ಗಮನಕ್ಕೆ ತಂದರು.

ಇದಕ್ಕೆ ಸಿಬಿಐ ಪರ ವಕೀಲ ಪಿ ಪ್ರಸನ್ನ ಕುಮಾರ್ ಅವರನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಯಾಕೆ ನೀವು ಅದನ್ನು ಇಲ್ಲಿಗೆ ವರ್ಗಾಯಿಸಲು ಮೆಮೊ ಸಲ್ಲಿಸಿಲ್ಲ’ ಎಂದು ಕೇಳಿದರು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಇದಕ್ಕೆ ಪ್ರಸನ್ನಕುಮಾರ್ ಅವರು “ಅದು ಸಿಬಿಐ ಕೆಲಸವಲ್ಲ. ಅರ್ಜಿದಾರರ ಕೋರಿಕೆ. ಅಷ್ಟಕ್ಕೂ, ಇದೇ ಪೀಠಕ್ಕೆ ಬರಬೇಕು ಎಂಬ ಬಗ್ಗೆ ಯಾವುದೇ ನ್ಯಾಯಾಂಗ ಆದೇಶವಿಲ್ಲ. ಅಂತೆಯೇ, ವಿಭಾಗೀಯ ಪೀಠವು ಅರ್ಜಿದಾರರ ಸಂಬಂಧಿಯೊಬ್ಬರು ಸಲ್ಲಿಸಿದ್ದ ಇದೇ ತಳಹದಿಯ ಮನವಿಯನ್ನು ತಳ್ಳಿ ಹಾಕಿ‌ತ್ತು. ಹೀಗಿರುವಾಗ ಶಿವಕುಮಾರ್ ಪುನಃ ಇದೇ ಪ್ರಾರ್ಥನೆ ಅಡಿಯಲ್ಲಿ ಸಲ್ಲಿರುವ ಅರ್ಜಿ ಇದೇ ಪೀಠಕ್ಕೆ ಬರಬೇಕು ಎಂದು ತಾವು ಹೇಗೆ ಹೇಳುತ್ತೀರಿ. ಇದನ್ನು ನಿರ್ಧರಿಸುವವರು ರೋಸ್ಟರ್‌ನ ಮಾಸ್ಟರ್ ಆದ ಚೀಫ್‌ ಜಸ್ಟೀಸ್‌” ಎಂದರು.

ಇದಕ್ಕೆ ಪೀಠವು “ಏನು ನೀವು ಹೇಳುತ್ತಿರುವುದು, ನಾನು ಆವತ್ತು ಮೌಖಿಕವಾಗಿ ನೀಡಿದ ನಿರ್ದೇಶನವನ್ನು ನೀವು ಪಾಲಿಸುವುದಿಲ್ಲವೇ, ಅದೇನು ಆದೇಶವಲ್ಲವೇ’ ಎಂದು ತರಾಟೆಗೆ ತೆಗೆದುಕೊಂಡಿತು. ಇದಕ್ಕೆ ಸಿಬಿಐ ವಕೀಲ ಪ್ರಸನ್ನಕುಮಾರ್ ಅವರು “ಸ್ವಾಮಿ, ಈ ಪೀಠಕ್ಕೆ ಆ ಅರ್ಜಿ ಬರಬಾರದು ಎಂಬ ಬಗ್ಗೆ ಸಿಬಿಐ ಅಭ್ಯಂತರವೇನೂ ಇಲ್ಲ. ಬೇಕಾದರೆ ತಾವು ಲಿಖಿತವಾದ ನ್ಯಾಯಾಂಗ ಆದೇಶ ಮಾಡಿ” ಎಂದರು. ಈ ಮಧ್ಯೆ, ಮಧ್ಯಂತರ ತಡೆಯಾಜ್ಞೆ ಮುಂದುವರಿಸಬೇಕು ಎಂಬ ಅರ್ಜಿದಾರರ ಕೋರಿಕೆಯನ್ನು ಮನ್ನಿಸಿ, ವಿಚಾರಣೆಯನ್ನು ಪೀಠವು ಮಾರ್ಚ್‌ 31ಕ್ಕೆ ಮುಂದೂಡಿತು.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp