ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು; ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರ:  ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಆರೋಪದಡಿ ಯುವಕನೋರ್ವನನ್ನ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 12 ನೇ ತರಗತಿಯಲ್ಲಿ ಓದುತ್ತಿದ್ದ 17 ವರ್ಷದ ಸಂತ್ರಸ್ತೆಯ ಮೇಲೆ ಗ್ರಾಮದ ಸಮೀಪವಿರುವ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಲಾಗಿದೆ. ಆಕೆ ತೀವ್ರ ರಕ್ತಸ್ರಾವದಿಂದ ಆಕೆ ಸಾವನ್ನಪ್ಪಿದ್ದಾಳೆ.

ಅದೇ ಗ್ರಾಮದ ಯುವಕನಿಂದ ಈ ನೀಚ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತದೇಹ ಕುಂಬಳಗೂಡು ಸಮೀಪದ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಪೋಕ್ಸೊ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com