ದಾವಣಗೆರೆ: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ! ವಿಡಿಯೋ

ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಉಂಟಾಗಿದೆ.
ಮೋದಿ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ
ಮೋದಿ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ
Updated on

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಉಂಟಾಗಿದೆ.

ಪ್ರಧಾನಿ ಮೋದಿ ಹೆಲಿಪ್ಯಾಡ್ ನಿಂದ ಮಹಾಸಂಗಮ ಸಮಾವೇಶದ ಕಾರ್ಯಕ್ರಮಕ್ಕೆ ರೋಡ್ ಶೋ ಮೂಲಕ ತೆರಳುತ್ತಿದ್ದಾಗ ಯುವಕನೊಬ್ಬ ಪ್ರಧಾನಿ ಬೆಂಗಾವಲು ವಾಹನದತ್ತ ತೆರಳಲು ಪ್ರಯತ್ನಿಸಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. 

ಸಮಾವೇಶದ ಮೂರು ಕಡೆಗಳಲ್ಲಿ ಭದ್ರತಾ ಲೋಪವಾಗಿದೆ ಪ್ರಧಾನಿ ಮೋದಿ ಭಾಷಣ ವೇಳೆ ಬಿಎಸ್ ಯಡಿಯೂರಪ್ಪ ಹೆಸರು ಪ್ರಸ್ತಾಪಿಸಿದಾಗ ಜನರು ಜೋರಾಗಿ ಕೂಗಿದ್ದಾರೆ. ಅಲ್ಲದೇ ಬಿಎಸ್ ವೈ ಭಾಷಣ ಮಾಡುವಾಗಲೂ ಆದೇ ರೀತಿಯಲ್ಲಿ ಕೂಗಿದ್ದಾರೆ. ಬ್ಯಾರಿಕೇಡ್ ಮುರಿದು ರಸ್ತೆ ಕಡೆಗೆ ಜನರ ಗುಂಪೊಂದು ತೆರಳಿರುವುದಾಗಿ  ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com