social_icon

ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಅಮಿತ್ ಶಾ ಸಮರ್ಥನೆ

ಮುಸ್ಲಿಮರಿಗೆ ಪ್ರವರ್ಗ 2ಬಿ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ.

Published: 26th March 2023 05:06 PM  |   Last Updated: 26th March 2023 05:06 PM   |  A+A-


Amit Shah

ಕೇಂದ್ರ ಗೃಹ ಸಚಿವ ಅಮಿತ್ ಶಾ

Posted By : Ramyashree GN
Source : PTI

ಬೀದರ್/ರಾಯಚೂರು: ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯ ಗೋರಟಾ ಗ್ರಾಮ ಮತ್ತು ರಾಯಚೂರು ಜಿಲ್ಲೆಯ ಗಬ್ಬೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೂ ಹೊಸ ಒಳಮೀಸಲಾತಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿಗೆ ಆಗಿರುವ ಅನ್ಯಾಯವನ್ನು ದೂರ ಮಾಡಲು ಪ್ರಯತ್ನಿಸಿದೆ ಎಂದು ಗಮನ ಸೆಳೆದರು.

ಸಂಪೂರ್ಣ 2B ಪ್ರವರ್ಗವು ಮುಸ್ಲಿಮರಿಗೆ ಮಾತ್ರ ಇತ್ತು. ಸಂವಿಧಾನಾತ್ಮಕವಾಗಿ ಸಮರ್ಥನೀಯವಲ್ಲ ಎಂದು ಬಿಜೆಪಿ ಸರ್ಕಾರವು ಅದನ್ನು ರದ್ದುಗೊಳಿಸಿತು ಮತ್ತು ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರಿಗೆ 2C ಮತ್ತು ವೀರಶೈವ ಲಿಂಗಾಯಿತರಿಗೆ 2Dಯಲ್ಲಿ ಸಮಾನವಾಗಿ ಶೇ 4ರಷ್ಟು ಮೀಸಲಾತಿಯನ್ನು ಹಂಚಿತು ಎಂದರು.

ಇದನ್ನೂ ಓದಿ: ಮೀಸಲಾತಿ ನೀತಿಯು ಬಿಜೆಪಿ ಚುನಾವಣಾ ಅಜೆಂಡಾವಾಗಿದೆ, ಬಿಜೆಪಿಯ ಉದ್ದೇಶ ಈ ರಾಜ್ಯದ ಜನರನ್ನು ವಂಚಿಸುವುದು: ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಆರೋಪ

ಇದರೊಂದಿಗೆ, 2B ಅನಗತ್ಯವಾಯಿತು. ಆದರೆ, ಒಕ್ಕಲಿಗರ ಮೀಸಲಾತಿ ಶೇ 4 ರಿಂದ 6ಕ್ಕೆ ಮತ್ತು ಲಿಂಗಾಯಿತರ ಮೀಸಲಾತಿ ಐದು ಪ್ರತಿಶತದಿಂದ ಏಳು ಪ್ರತಿಶತಕ್ಕೆ ಏರಿತು. ಬಿಜೆಪಿಗೆ ಎಂದಿಗೂ ತುಷ್ಟೀಕರಣದಲ್ಲಿ ನಂಬಿಕೆ ಇಲ್ಲ. ಹಾಗಾಗಿ, ಮೀಸಲಾತಿಯನ್ನು ಬದಲಾಯಿಸಲು ನಿರ್ಧರಿಸಿದೆ ಎಂದು ಶಾ ಈ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡರು.

ಬಿಜೆಪಿ ಅಲ್ಪಸಂಖ್ಯಾತರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿತು ಮತ್ತು ಒಕ್ಕಲಿಗರಿಗೆ ಎರಡು ಪ್ರತಿಶತ ಮತ್ತು ಲಿಂಗಾಯತರಿಗೆ ಎರಡು ಪ್ರತಿಶತವನ್ನು ನೀಡಿದೆ. ಅಲ್ಪಸಂಖ್ಯಾತರ ಮೀಸಲಾತಿಯು ಸಾಂವಿಧಾನಿಕವಾಗಿ ಮಾನ್ಯವಾಗಿಲ್ಲ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಈ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣಕ್ಕಾಗಿ ಇದನ್ನು ಮಾಡಿದೆ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿದೆ ಎಂದು ಅವರು ಹೇಳಿದರು.


Stay up to date on all the latest ರಾಜ್ಯ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp