social_icon

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ರದ್ದು: ಸರ್ಕಾರದ ನಿರ್ಧಾರದ ಬಗ್ಗೆ ತಜ್ಞರು ಏನಂತಾರೆ?

2B ಮೀಸಲಾತಿಯು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾಗಿತ್ತು. ಆದರೆ, ಇಡಬ್ಲ್ಯುಎಸ್ ಮೀಸಲಾತಿಯು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮಾತ್ರ ಲಭ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

Published: 28th March 2023 08:41 AM  |   Last Updated: 28th March 2023 03:14 PM   |  A+A-


Representative Image

ಪ್ರಾತಿನಿಧಿಕ ಚಿತ್ರ

Posted By : Ramyashree GN
Source : Express News Service

ಬೆಂಗಳೂರು: ಮುಸ್ಲಿಮರಿಗೆ ಇತರೆ ಹಿಂದುಳಿದ ವರ್ಗಗಳ 2ಬಿ (ಧಾರ್ಮಿಕ ಅಲ್ಪಸಂಖ್ಯಾತರು) ವರ್ಗದಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಮೂಲಕ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮೀಸಲಾತಿಯ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದಿಂದ ಸಮುದಾಯದ ಸದಸ್ಯರಲ್ಲಿ ಅಭದ್ರತೆ ಮತ್ತು ಗೊಂದಲಕ್ಕೆ ಕಾರಣವಾಗಿದೆ.

ಶುಕ್ರವಾರದ ಕ್ಯಾಬಿನೆಟ್ ನಿರ್ಧಾರದ ಪ್ರಕಾರ, 2B ಪ್ರವರ್ಗವನ್ನು ರದ್ದುಗೊಳಿಸಲಾಗಿದೆ ಮತ್ತು ಮುಸ್ಲಿಮರಿಗೆ ಆರ್ಥಿಕವಾಗಿ ದುರ್ಬಲ ವಿಭಾಗ (ಇಡಬ್ಲ್ಯುಎಸ್) ಅಡಿಯಲ್ಲಿ ಮೀಸಲಾತಿಯನ್ನು ನೀಡಲಾಗಿದೆ. ಮುಸ್ಲಿಮರು ಈಗ ಇಡಬ್ಲ್ಯುಎಸ್ ಅಡಿಯಲ್ಲಿ ಕಡಿಮೆ ಮೀಸಲಾತಿಯನ್ನು ಪಡೆಯುತ್ತಾರೆಯೇ ಎಂದು ಸಮುದಾಯ ಪ್ರಶ್ನಿಸುತ್ತಿದೆ.

2B ಮೀಸಲಾತಿಯು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾಗಿತ್ತು. ಆದರೆ, ಇಡಬ್ಲ್ಯುಎಸ್ ಮೀಸಲಾತಿಯು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮಾತ್ರ ಲಭ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿಎಸ್ ದ್ವಾರಕಾನಾಥ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಕರ್ನಾಟಕದಲ್ಲಿ (ಅಂದಿನ ಮೈಸೂರು ರಾಜ್ಯವನ್ನು ಒಳಗೊಂಡಂತೆ), ನಾಲ್ವಡಿ ಕೃಷ್ಣರಾಜ ಒಡೆಯರ್, ಹಾವನೂರು ಅಥವಾ ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ಅವರ ಅನೇಕ ವರದಿಗಳು ಮುಸ್ಲಿಮರನ್ನು 'ಧಾರ್ಮಿಕ ಹಿಂದುಳಿದ ವರ್ಗ' ಎಂದು ಪರಿಗಣಿಸಿದೆ ಮತ್ತು ಕೇವಲ ಮೀಸಲಾತಿಗಾಗಿ 'ಧರ್ಮ' ಎಂದು ಪರಿಗಣಿಸಿಲ್ಲ ಎಂದಿದ್ದಾರೆ.

ಇದನ್ನೂ ಓದಿ:  ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಅಮಿತ್ ಶಾ ಸಮರ್ಥನೆ

‘ಮುಸ್ಲಿಮರು ಆತಂಕ ಪಡಬಾರದು’

ಇಂದಿರಾ ಸಾಹ್ನಿ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಸರ್ಕಾರವು ಯಾವುದೇ ಸಮುದಾಯವನ್ನು ಮೀಸಲಾತಿಯಿಂದ ತೆಗೆದುಹಾಕಲು ಅಥವಾ ಸೇರಿಸಲು ಬಯಸಿದಾಗ, ಆ ಸಮುದಾಯದ ಪ್ರಾಯೋಗಿಕ ಡೇಟಾ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಸರ್ಕಾರದ ಬಳಿ ಅಂತಹ ಡೇಟಾ ಇಲ್ಲ ಮತ್ತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಅವರು ಹೇಳಿದರು.

ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಮಾತನಾಡಿ, ಕಳೆದ ಎಲ್ಲಾ ವರ್ಷಗಳಲ್ಲಿ ಮುಸ್ಲಿಮರಿಗೆ ವರ್ಗ (2ಬಿ) ಅಡಿಯಲ್ಲಿ ಕೋಟಾ ನೀಡಲಾಗಿದೆ. ಇದು ಒಂದು ನಿರ್ದಿಷ್ಟ ಧರ್ಮಕ್ಕೆ ಮಾತ್ರ ಮೀಸಲಾಗಿಲ್ಲ. ನಾವು ಅದನ್ನು ಸರಿಪಡಿಸಿದ್ದೇವೆ. ಕರ್ನಾಟಕದಲ್ಲಿ ಶೇ 97 ರಷ್ಟು ಸಮುದಾಯಗಳು/ಜಾತಿಗಳು ಮೀಸಲಾತಿ ಹೊಂದಿವೆ. ಇಡಬ್ಲ್ಯುಎಸ್ ಕೋಟಾವು ಈ ಯಾವುದೇ ಮೀಸಲಾತಿ ಅಡಿಯಲ್ಲಿ ಇಲ್ಲದವರಿಗೆ ಮಾತ್ರ ಮೀಸಲಾಗಿದೆ. ಕರ್ನಾಟಕದ ಜನಸಂಖ್ಯೆಯ ಶೇ 3ರಷ್ಟು ಜನರು ಶೇ 10ರಷ್ಟು ಇಡಬ್ಲ್ಯುಎಸ್ ಕೋಟಾವನ್ನು ಪಡೆಯಲು ಅರ್ಹರಾಗಿರುವ ಕಾರಣ ಮುಸ್ಲಿಮರು ದೊಡ್ಡ ಭಾಗವನ್ನು ಪಡೆಯುತ್ತಿರುವುದರಿಂದ ಆತಂಕಪಡಬೇಕಾಗಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಶೇ 4ರಷ್ಟು ಮೀಸಲಾತಿ ರದ್ದು; ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದ ಮುಸ್ಲಿಂ ವೇದಿಕೆ

ಸರ್ಕಾರದ ಮೀಸಲಾತಿ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಿದ್ಧವಾಗಿದ್ದೇವೆ. ಅಲ್ಲದೆ, ತಾವು ಮತ್ತೆ ಅಧಿಕಾರಕ್ಕೆ ಬಂದರೆ, ಈ ಕ್ಯಾಬಿನೆಟ್ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತೇವೆ  ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, 1990ರ ದಶಕದ ಆರಂಭದಿಂದಲೂ ಮುಸ್ಲಿಮರಿಗೆ ಕೋಟಾ ಸವಲತ್ತು ನೀಡಲಾಗಿದೆ. ಮುಸ್ಲಿಮರು ಈಗ ಇಡಬ್ಲ್ಯುಎಸ್ ಅಡಿಯಲ್ಲಿ ಇತರ ಜಾತಿಗಳೊಂದಿಗೆ ಹೋರಾಡಬೇಕಾಗಿದೆ. ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಖಂಡಿತವಾಗಿಯೂ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಅವರು ಹೇಳಿದರು. 

ರಾಜ್ಯ ಸಚಿವ ಸಂಪುಟದ ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • ಅಮೃತ, ಚೈಲ್ಡ್‌ ರೈಟ್ಸ್‌ ಟ್ರಸ್ಟ್‌, ಬೆಂಗಳೂರು

    you people must improve you Kannada writing language for the Paper. While reading it feels like I am reading translated version.
    8 months ago reply
flipboard facebook twitter whatsapp