ಗಾಂಧಿ ಕುಟುಂಬಕ್ಕೆ ದೇಶದಲ್ಲಿ ಪ್ರತ್ಯೇಕ ಕಾನೂನಿದೆ ಎಂದು ಕಾಂಗ್ರೆಸ್ ನಂಬಿದೆ: ರಾಹುಲ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

ಗಾಂಧಿ ಕುಟುಂಬಕ್ಕೆ  ದೇಶದಲ್ಲಿ ಕಾನೂನು ವಿಭಿನ್ನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜನರು ನಂಬಿದಂತಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸ್ಮೃತಿ ಇರಾನಿ
ಸ್ಮೃತಿ ಇರಾನಿ
Updated on

ಬೆಂಗಳೂರು: ಗಾಂಧಿ ಕುಟುಂಬಕ್ಕೆ  ದೇಶದಲ್ಲಿ ಕಾನೂನು ವಿಭಿನ್ನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜನರು ನಂಬಿದಂತಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತ ಜನತಾ ಯುವ ಮೋರ್ಚಾ ವತಿಯಿಂದ ಯುವ ಸಂವಾದದ ಅಂಗವಾಗಿ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಪ್ರಥಮ ಬಾರಿ ಮತ ಚಲಾಯಿಸುತ್ತಿರುವ ಯುವ ಜನತೆಯೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದರು.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದು ರಾಜಕೀಯ ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಕೇಳಿದ ವಿದ್ಯಾರ್ಥಿಗೆ ಪ್ರತಿಕ್ರಿಯಿಸಿದ ಅವರು, ಗಾಂಧಿ ಕುಟುಂಬವು ತಮಗೆ ಪ್ರತ್ಯೇಕ ಕಾನೂನಿದೆ ಎಂದು ನಂಬುತ್ತದೆ ಎಂದು ಹೇಳಿದರು.

ನೀವು ರಾಹುಲ್ ಗಾಂಧಿ ಎಂಬ ಕಾರಣಕ್ಕೆ ನೀವು ಇಡೀ ಸಮುದಾಯದ ವಿರುದ್ಧ ಜನಾಂಗೀಯ ನಿಂದನೆಯನ್ನು ಮಾಡಬಹುದು ಮತ್ತು ಕಾನೂನಿನ ಮೂಲಕ ಜವಾಬ್ದಾರರಾಗಿರಬಾರದು ಎಂದು ಪ್ರಜಾಪ್ರಭುತ್ವದಲ್ಲಿ ನಾವು ಹೇಳಬೇಕೇ?  ಗಾಂಧಿ ಕುಟುಂಬದೊಂದಿಗೆ ವ್ಯವಹರಿಸುವ ಕಾನೂನು ಪ್ರತ್ಯೇಕವಾಗಿರಬೇಕು ಎಂದು ಅವರ ಪಕ್ಷದವರು ದಾಖಲೆಯಲ್ಲಿ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.

ಸರ್ಕಾರ ರಾಹುಲ್‌ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿಲ್ಲ. ಕೋರ್ಟ್ ತೀರ್ಪನ್ನು ಆಧರಿಸಿ ಸಭಾಪತಿಗಳು ಈ ನಿರ್ಣಯ ಕೈಗೊಂಡಿದ್ದಾರೆ. ಹಿಂದುಳಿದ ವರ್ಗವನ್ನು ದೂಷಿಸಿದ ಕಾರಣಕ್ಕಾಗಿ ಕೋರ್ಟ್ ನಿಂದ ಈ ತೀರ್ಪು ಬಂದಿದೆ. ರಾಹುಲ್‌ ಕೇವಲ ಒಬ್ಬ ವ್ಯಕ್ತಿಯನ್ನು ಟೀಕಿಸಿಲ್ಲ, ಬದಲಾಗಿ ಒಂದಿಡೀ ಸಮುದಾಯವನ್ನು ಹೀಗಳೆದಿದ್ದಾರೆ. ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅದರನ್ವಯವಾಗಿ ಸಭಾಪತಿಗಳು ಸಂವಿಧಾನಬದ್ಧವಾಗಿ ಕ್ರಮ ವಹಿಸಿದ್ದಾರೆ ಎಂದರು. ಗಾಂಧಿ ಅವರು ಕಾನೂನಿಗಿಂತ ಮೇಲಿನವರು ಎಂದು ಭಾವಿಸುತ್ತಾರೆ ಮತ್ತು ನ್ಯಾಯಾಲಯವು ಅವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು  ತಿಳಿದಿದ್ದಾರೆ ಅವರು ಹೇಳಿದರು.

ರಾಹುಲ್ ಗಾಂಧಿ ಕಾನೂನಿಗಿಂತ ಮೇಲಿದ್ದಾರೆ ಮತ್ತು ಈ ದೇಶದ ಯಾವುದೇ ನ್ಯಾಯಾಲಯವು ಅವರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು ಅವರು ನಂಬಿದ್ದಾರೆ ಎಂದು ಸ್ಮೃತಿ ಇರಾನಿ ಲೇವಡಿ ಮಾಡಿದರು.

ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ಮೋದಿ ಪ್ರಶ್ನೆ’ ಭಾರತದಲ್ಲಿ ಏಕೆ ಸೆನ್ಸಾರ್ ಆಗಿದೆ ಎಂಬ ಮತ್ತೊಬ್ಬ ವಿದ್ಯಾರ್ಥಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಧಾರ್ಮಿಕ ವೈಷಮ್ಯವನ್ನು ಬಿತ್ತಲು ತಪ್ಪು ಮಾಹಿತಿಯನ್ನು ಬಳಸಲಾಗುವುದಿಲ್ಲ ಎಂದು ಹೇಳಿದರು.

ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ ಹೊಂದಿದೆ, ಹೀಗಾಗಿ ಭಾರತವನ್ನು ಅಪಖ್ಯಾತಿಗೊಳಿಸಲು ಸಾಕ್ಷ್ಯಚಿತ್ರವನ್ನು ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.  ಬಿಬಿಸಿ ಸಾಕ್ಷ್ಯಚಿತ್ರವನ್ನು ಫ್ಲ್ಯಾಗ್ ಮಾಡಲು ಪ್ರಯತ್ನಿಸಿದ ಸಮಸ್ಯೆಯನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದರು. ಸೋನಿಯಾ ಗಾಂಧಿಯವರ ಅಡಿಯಲ್ಲಿದ್ದ ಏಜೆನ್ಸಿಗಳು ನರೇಂದ್ರ ಮೋದಿಯವರನ್ನು ರಾಜಕೀಯವಾಗಿ ಅಪಖ್ಯಾತಿಗೊಳಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದವು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com