social_icon

ನಿಯಮ ಉಲ್ಲಂಘನೆಯನ್ನು ಸರಿಪಡಿಸಿಕೊಳ್ಳಲು ರಾಜ್ಯದ ಅನಧಿಕೃತ ಶಾಲೆಗಳಿಗೆ ಕಾಲಾವಕಾಶ: ಶಿಕ್ಷಣ ಇಲಾಖೆ

ರಾಜ್ಯದಲ್ಲಿನ ಅನಧಿಕೃತ ಶಾಲೆಗಳಿಗೆ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ನಿಯಮಗಳ ಉಲ್ಲಂಘನೆಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Published: 28th March 2023 09:13 AM  |   Last Updated: 28th March 2023 07:23 PM   |  A+A-


Image used for representation

ಪ್ರಾತಿನಿಧಿಕ ಚಿತ್ರ

Posted By : Ramyashree GN
Source : Express News Service

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಶಾಲೆಗಳಿಗೆ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ನಿಯಮಗಳ ಉಲ್ಲಂಘನೆಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಲ್ಲಿ 1,600 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಅವುಗಳಲ್ಲಿ 937 ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿವೆ. ಅಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ. ಇಲಾಖೆ ಮೂಲಗಳು ವಿದ್ಯಾರ್ಥಿಗಳು ಲಕ್ಷಗಳಲ್ಲಿರಬಹುದು ಎಂದಿವೆ. 

'ನಾವು ಅಂತಹ ಶಾಲೆಗಳ ಸಮೀಕ್ಷೆಯನ್ನು ನಡೆಸಿದ್ದೇವೆ ಮತ್ತು ಡಿಎಸ್ಇಎಲ್‌ಗೆ ವರದಿಯನ್ನು ಸಲ್ಲಿಸಿದ್ದೇವೆ' ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್ ವಿಶಾಲ್ ಹೇಳಿದರು.

'ಶಾಲಾ ಶಿಕ್ಷಣಕ್ಕೆ ತೊಂದರೆ ಕೊಡಲು ಬಯಸುವುದಿಲ್ಲ'

ಬೋರ್ಡ್ ಪರೀಕ್ಷೆಯ ನಂತರ ಅಂತಹ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಇದಕ್ಕೂ ಮೊದಲು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು: ಅನಧಿಕೃತ ಬ್ರ್ಯಾಂಚ್; ಪ್ರತಿಷ್ಠಿತ ಶಾಲೆ ವಿರುದ್ಧ ಎಫ್ ಐ ಆರ್ ದಾಖಲು!

ಅಂತಹ ಶಾಲೆಗಳ ವಿರುದ್ಧದ ಸಾಮಾನ್ಯ ದೂರುಗಳೆಂದರೆ, ಸರ್ಕಾರದ ಸಂಯೋಜನೆಯಿಲ್ಲದೆ ತರಗತಿಗಳನ್ನು ನಡೆಸುವುದು, ಸಂಯೋಜನೆ ಕುರಿತು ಪೋಷಕರನ್ನು ತಪ್ಪುದಾರಿಗೆಳೆಯುವುದು, ಯಾವುದೇ ಅನುಮತಿಯಿಲ್ಲದ ಗ್ರೇಡ್‌ಗಳಿಗೆ ತರಗತಿಗಳನ್ನು ನಡೆಸುವುದು ಹಾಗು ಕಟ್ಟಡಗಳು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ. ಇಂತಹ ಶಾಲೆಗಳು ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಒಂದಾದ ಪ್ರಮುಖ ಸಂಸ್ಥೆಯು ನಗರದಲ್ಲಿ ಮತ್ತು ಇತರೆಡೆ ಯಾವುದೇ ಸಂಯೋಜನೆಯಿಲ್ಲದ ಅನೇಕ ಶಾಖೆಗಳನ್ನು ಹೊಂದಿದೆ. ಆದರೂ, ಅದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಇಎಸ್ಇ) ನಿಂದ ಸಂಯೋಜಿತ ಎಂದು ಹೇಳಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಅನಧಿಕೃತ ಶಾಲೆಗಳನ್ನು ಸರಿಪಡಿಸಲು ಸಮಯ ನೀಡಲಾಗುತ್ತದೆ. 'ನಾವು ಮಕ್ಕಳ ಶಾಲಾ ಶಿಕ್ಷಣವನ್ನು ಅಡ್ಡಿಪಡಿಸಲು ಬಯಸುವುದಿಲ್ಲ. ಅಂತಹ ಶಾಲೆಗಳನ್ನು ಮುಚ್ಚುವುದು ಅಥವಾ ತರಗತಿಗಳನ್ನು ತಕ್ಷಣವೇ ನಿಲ್ಲಿಸುವುದು ಅರ್ಥವಲ್ಲ. ಏಕೆಂದರೆ, ಇದು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಸಂಬಂಧಿತ ದಾಖಲೆಗಳನ್ನು ಸಲ್ಲಿಸಲು ನಾವು ಅವರಿಗೆ ಸಮಯವನ್ನು ನೀಡುತ್ತೇವೆ. ಇದರಿಂದ ಅವರು ತರಗತಿಗಳನ್ನು ಮುಂದುವರಿಸಲು ಅವಕಾಶ ಮಾಡಿಕೊಡಲಾಗುತ್ತದೆ' ಎಂದು ಅವರು ಹೇಳಿದರು.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp