
ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಮುರುಗೇಶ್ ನಿರಾಣಿ ಮತ್ತಿತರರು
ಬೆಂಗಳೂರು: ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು. ಚಾಮರಾಜನಗರ, ಮಂಡ್ಯ, ಬೀದರ್, ಕೊಡಗು, ಕೊಪ್ಪಳ, ಬಾಗಲಕೋಟೆ, ಹಾವೇರಿ, ಕೋಲಾರ ಮತ್ತು ರಾಯಚೂರಲ್ಲಿ ನೂತನ ವಿಶ್ವವಿದ್ಯಾಲಯಗಳು ತಲೆ ಎತ್ತಿವೆ.
ಇದೇ ಸಂದರ್ಭದಲ್ಲಿ ಸರ್ಕಾರಿ ಕೃಷ್ಣರಾಜೇಂದ್ರ ಸಿಲ್ವರ್ ಜ್ಯೂಬಿಲಿ ತಾಂತ್ರಿಕ ಮಹಾವಿದ್ಯಾಲಯ, ಉನ್ನತ ಶಿಕ್ಷಣ ಸೌಧ ಹಾಗೂ ತಾಂತ್ರಿಕ ಶಿಕ್ಷಣ ಭವನ ಕಟ್ಟಡ ಉನ್ನತೀಕರಣದ ಶಂಕುಸ್ಥಾಪನೆ ನೆರವೇರಿಸಲಾಯಿತು.
ನಂತರ ಮಾತನಾಡಿದ ಮುಖ್ಯಮಂತ್ರಿ, ಮುಂಬರುವ ದಿನಗಳಲ್ಲಿ ಕರ್ನಾಟಕವನ್ನು ವಿಶ್ವದಲ್ಲಿಯೇ ಅತಿ ದೊಡ್ಡ ಎಜುಕೇಷನ್ ಹಬ್ ಮಾಡಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದರು.
ಇದನ್ನೂ ಓದಿ: ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸರ್ಕಾರ ಆದೇಶ
ರಾಜ್ಯದ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಕೆಐಟಿಗಳಾಗಿ ಉನ್ನತೀಕರಿಸಲಾಗಿದೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕು ಎಂಬ ಆಶಯದೊಂದಿಗೆ 9 ಹೊಸ ವಿಶ್ವವಿದ್ಯಾಲಯಗಳನ್ನು ನಿರ್ಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಶಿಕ್ಷಣ ಮಾಡೆಲ್ ಎಲ್ಲ ರಾಜ್ಯಗಳಿಗೆ ಮಾದರಿಯಾಗಲಿದೆ.
— Dr. Ashwathnarayan C. N. (@drashwathcn) March 28, 2023
ಶಿಕ್ಷಕರ ಸಾಮರ್ಥ್ಯ ಮತ್ತು ಬೋಧನಾ ಗುಣಮಟ್ಟವು ಹೆಚ್ಚಾದಾಗ ಮಾತ್ರ ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧ್ಯ. ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯು ಈ ನಿಟ್ಟಿನಲ್ಲಿ ಅತ್ಯಂತ ಸಕ್ರೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ… pic.twitter.com/kkCPymjRQq