ಹಾಸನ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

ಜಾಮಿಯಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ಗುಂಪೊಂದು ಮೆರವಣಿಗೆಯನ್ನು ವಿರೋಧಿಸಿದಾಗ ಮತ್ತೊಂದು ಗುಂಪಿನೊಂದಿಗೆ ಘರ್ಷಣೆ ಉಂಟಾಯಿತು. ಈ ವೇಳೆ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ.

ಮುರಳಿ ಮತ್ತು ಹರ್ಷ ಎಂಬುವವರಿಗೆ ಕುತ್ತಿಗೆ ಮತ್ತು ಹೊಟ್ಟೆಯಲ್ಲಿ ಗಾಯವಾಗಿದ್ದು, ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನೆ ಬಳಿಕ, ಕಾನೂನು ಸುವ್ಯವಸ್ಥೆ ಕಾಪಾಡಲು ಚನ್ನರಾಯಪಟ್ಟಣ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ಮತ್ತು ಪ್ರತಿದೂರು ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com