ಚಿತ್ರದುರ್ಗ: ಕರ್ನಾಟಕ ಗಡಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನಾಭರಣ ವಶ

ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನ ಮತ್ತು ವಜ್ರಾಭರಣವನ್ನು ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿರುವ ಕಣಕುಪ್ಪೆ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನ ಮತ್ತು ವಜ್ರಾಭರಣವನ್ನು ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿರುವ ಕಣಕುಪ್ಪೆ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯಿಂದ ಬೆಂಗಳೂರಿಗೆ ಸಾಗುತ್ತಿದ್ದ ವಾಹನವನ್ನು ಪರಿಶೀಲನೆ ಮಾಡಿದಾಗ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿವೆ. ಇವು ಪ್ರತಿಷ್ಠಿತ ಚಿನ್ನಾಭರಣ ಮಳಿಗೆಗೆ ಸೇರಿದ್ದಾಗಿ ಸಾಗಣೆದಾರರು ಮಾಹಿತಿ ನೀಡಿದ್ದಾರೆ. ಸಕಾಲಕ್ಕೆ ದಾಖಲೆ ಹಾಜರುಪಡಿಸದ ಕಾರಣಕ್ಕೆ ವಶಕ್ಕೆ ಪಡೆದು ಪರಿಶೀಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಜಿ.ಆರ್‌.ಜೆ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ದಾಖಲೆ ಇಲ್ಲದ ಹಣ, ಸಾಮಗ್ರಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಲಾಗುವುದು. ಇವು ಚುನಾವಣೆ ಅಕ್ರಮಕ್ಕೆ ಬಳಕೆಯಾಗುತ್ತಿರುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರವಾದ ಪರಿಶೀಲನೆ ನಡೆಸಲಾಗುತ್ತಿದ್ದು, ಎಲ್ಲಾ ಚುನಾವಣಾ ಅವ್ಯವಹಾರಗಳನ್ನು ತಡೆಗಟ್ಟುವುದು ಗುರಿಯಾಗಿದೆ ಎಂದು ಜಿಪಂ ಸಿಇಒ ದಿವಾಕರ್ ಎಂ.ಎಸ್. ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com