ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತವಾಗಿ ತಿಂಡಿ-ತಿನಿಸು ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್ಗಳ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದ್ದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ಹೋಟೆಲ್ ಮಾಲೀಕರ ಸಂಘಟನೆ ಬಿಬಿಎಂಪಿ ಕ್ರಮದ ವಿರುದ್ಧ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ವೇಳೆ ಮತದಾನ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೆವು. ಇದಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಮನವಿ ಮಾಡಿದ್ದು ಇದಕ್ಕೆ ಹೈಕೋರ್ಟ್ ಸಮ್ಮತಿಸಿದೆ.
ನಗರದ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಮತ್ತು ಚಾಲುಕ್ಯ ಸಾಮ್ರಾಟ್ ಹೋಟೆಲ್ಗಳು ಮತದಾನ ಮಾಡಿದ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯಗಳನ್ನು ನೀಡುವುದಾಗಿ ಪ್ರಕಟಣೆ ನೀಡಿದ್ದವು. ಆದರೆ, ಇದಕ್ಕೆ ಬಿಬಿಎಂಪಿ ಆಕ್ಷೇಪ ವ್ಯಕ್ತಪಡಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಇಂತಹ ಆಫರ್ಗಳನ್ನು ಹೋಟೆಲ್ ಮಾಲೀಕರು ನೀಡಬಾರದು. ಇದಕ್ಕೆ ನಾವು ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದರು. ನಂತರ, ಇಂತಹ ಆಫರ್ಗಳನ್ನು ಹೋಟೆಲ್ ಮಾಲೀಕರು ನೀಡಬಾರದು ಎಂದು ಸೂಚನೆಯನ್ನೂ ನೀಡಿದ್ದರು.
Advertisement