ಬಜರಂಗದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಮೂರ್ಖತನಕ್ಕೆ ನಿದರ್ಶನ ಎಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್.
ನಿರ್ಮಲಾ ಸೀತಾರಾಮನ್.

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ತಮ್ಮ ಮತಹಕ್ಕು ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ ಮೇಲೆ ನಿಷೇಧ ಹೇರುವ ಭರವಸೆ ನೀಡಿರುವುದು ಮೂರ್ಖತನಕ್ಕೆ ನಿದರ್ಶನವಾಗಿದೆ. ನಾವು ಯಾವಾಗಲೂ ಬಜರಂಗ ಬಲಿಯನ್ನು ಗೌರವಿಸುತ್ತೇವೆ ಮತ್ತು ಹನುಮಾನ್ ಚಾಲೀಸಾವನ್ನು ಓದುತ್ತೇವೆ. ಆದರೆ, ಕಾಂಗ್ರೆಸ್ಸಿಗೆ ಇದು ಚುನಾವಣಾ ವಿಷಯವಾಗಿದೆ. ಕರ್ನಾಟಕವು ಹನುಮಂತನ ಜನ್ಮಸ್ಥಳವಾಗಿದೆ. ಕಾಂಗ್ರೆಸ್ ನಾಯಕರು ಅಲ್ಲಿ, ಇಲ್ಲಿ ಹೇಳಿಕೆ ನೀಡುತ್ತಿಲ್ಲ, ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳುತ್ತಿದೆ. ಇದು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com