ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರಿನ ಮೇಲೂ ಕಲ್ಲು ತೂರಾಟ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಘಟನೆಯಲ್ಲಿ ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

ಮೂಡುಶೆಡ್ಡೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಿಥುನ್ ರೈ ಅವರ ವಾಹನ ಹಾದು ಹೋಗುವ ವೇಳೆ ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದು, ಈ ವೇಳೆ ಘರ್ಷಣೆ ಶುರುವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com