ಬಂಗಾರಪೇಟೆ ಬಳಿ ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು

ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.
ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು
ಹಳಿತಪ್ಪಿದ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು

ಬೆಂಗಳೂರು: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.

ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್‌ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ 22625)ರೈಲಿನ ಕೊನೆಯ ಕೋಚ್‌ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್‌ಟಿ) ಕೂಡ ಸ್ಥಳಕ್ಕೆ ತಲುಪಿದೆ.

ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com