social_icon

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: ಮಠಾಧೀಶರ ಒತ್ತಾಯ

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಮತದಾರರು 135 ಸ್ಥಾನಗಳನ್ನು ನೀಡಿ, ಬಹುಮತದ ಸರಕಾರ ರಚನೆಗೆ ಹಾದಿ ಸುಗಮಗೊಳಿಸಿದ್ದಾರೆ. ಗಮನಾರ್ಹ ಅಂಶವೆಂದರೆ, ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಮತದಾರರು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಕಾರಣಕ್ಕಾಗಿ 34 ಲಿಂಗಾಯತ ಶಾಸಕರು ಆಯ್ಕೆಗೊಂಡಿದ್ದಾರೆ.

Published: 16th May 2023 09:25 AM  |   Last Updated: 16th May 2023 09:25 AM   |  A+A-


Eshwar Khandre,

ಈಶ್ವರ್ ಖಂಡ್ರೆ

Posted By : Shilpa D
Source : Online Desk

ಕಲಬುರಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರಿಗೆ ಸಚಿವ ಸಂಪುಟ ರಚನೆ ವೇಳೆ ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಶ್ರೀಶೈಲಂ ಮತ್ತು ಸುಲಫಲ ಮಠದ ಪೀಠಾಧಿಪತಿ ಸಾರಂಗಧರ ದೇಶಿಕೇಂದ್ರ ಶಿವಾಚಾರ್ಯರು, ಚವದಾಪುರಿ ಹಿರೇಮಠ ಸಂಸ್ಥಾನದ ಡಾ.ರಾಜಶೇಖರ ಶಿವಾಚಾರ್ಯರು, ಮುಗಳನಾಗಾವಿ  ಕಟ್ಟಿಮನಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ  ಸ್ವಾಮೀಜಿಗಳು, ‘ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಮತದಾರರು 135 ಸ್ಥಾನಗಳನ್ನು ನೀಡಿ, ಬಹುಮತದ ಸರಕಾರ ರಚನೆಗೆ ಹಾದಿ ಸುಗಮಗೊಳಿಸಿದ್ದಾರೆ. ಗಮನಾರ್ಹ ಅಂಶವೆಂದರೆ, ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಮತದಾರರು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಕಾರಣಕ್ಕಾಗಿ 34 ಲಿಂಗಾಯತ ಶಾಸಕರು ಆಯ್ಕೆಗೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್​ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆ

ಇಂಥದ್ದೊಂದು ಅಭೂತಪೂರ್ವ ಯಶಸ್ಸಿನ ಹಿಂದೆ ಈಶ್ವರ ಖಂಡ್ರೆಯವರ ಸಂಘಟನಾ ಪರಿಶ್ರಮವನ್ನು ನಿರ್ಲಕ್ಷಿಸುವಂತಿಲ್ಲ. ಹಾಗಾಗಿ ಖಂಡ್ರೆಯವರಿಗೆ ಹೊಸದಾಗಿ ರಚನೆ ಆಗಲಿರುವ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು’ ಎಂದಿದ್ದಾರೆ. ‘ಕಲ್ಯಾಣ ಕರ್ನಾಟಕ ಪ್ರದೇಶ ಒಳಗೊಂಡಂತೆ ಇಡೀ ರಾಜ್ಯದಲ್ಲಿ ವೀರಶೈವ–ಲಿಂಗಾಯತ ಸಮುದಾಯದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯದ 16 ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಗೊಂಡಿದ್ದರು.

ಈಶ್ವರ ಖಂಡ್ರೆ ಅವರು ವೀರಶೈವ-ಲಿಂಗಾಯತ ಸಮುದಾಯದ ಜನಪ್ರಿಯ ನಾಯಕರಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ತಳಹದಿ ಬಲವಾಗಿದೆ. ಈಶ್ವರ ಖಂಡ್ರೆ ಅವರು ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಸದಾ ಅನುಸರಿಸುತ್ತಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp