ಕುಶಾಲ್ ನಾಯ್ಕ್
ಕುಶಾಲ್ ನಾಯ್ಕ್

PUC ಮರು ಮೌಲ್ಯಮಾಪನ: ತಬಸುಮ್ ಶೇಖ್ ಹಿಂದಿಕ್ಕಿ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. 

ಬೆಂಗಳೂರು: ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. 

ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ನನ್ನು ಹಿಂದಿಕ್ಕಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕುಶ್​ ನಾಯ್ಕ್​ ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್​ ಬಂದಿದ್ದಾರೆ. 

ಇಂದು ಪಿಯು ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಈ ಮೂಲಕ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ಸತತ ಎಂಟನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ.

Related Stories

No stories found.

Advertisement

X
Kannada Prabha
www.kannadaprabha.com