ನಿಮ್ಮ ಆಡಳಿತದಲ್ಲಿ ಕರ್ನಾಟಕ ಶಾಂತಿಯುತವಾಗಿರಲಿ: ಸಿದ್ದರಾಮಯ್ಯ, ಡಿಕೆಶಿಗೆ ರಾಜ್ಯ ಬಿಜೆಪಿ ಅಭಿನಂದನೆ

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದಿದೆ.
ಬಿಜೆಪಿ
ಬಿಜೆಪಿ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ.

ಈ ಬೆನ್ನಲ್ಲೇ ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದೆ.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದಿದೆ.

ಮುಂದುವರಿದು, ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ನೀಡಿರುವ ನಿಮ್ಮ ಸುಳ್ಳುಗಳಂತೆ ಆಗದೆ, ಮುಂದಿನ ದಿನಗಳಲ್ಲಿ ನೀವು ಭರವಸೆ ನೀಡಿದ ಐದು 'ಖಾತರಿ'ಗಳನ್ನು ಬೇಷರತ್ತಾಗಿ ಜಾರಿಗೊಳಿಸುತ್ತೀರಿ ಎಂದು ನಾವು ನಂಬುತ್ತೇವೆ ಎಂದು ಟೀಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com