ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮುಖಾಮುಖಿ: ಕುಶಲೋಪರಿ ವಿಚಾರಿಸಿದ ಡಿ.ಕೆ.ಶಿವಕುಮಾರ್

ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.
ಬಿಜೆಪಿ ನಾಯಕರೊಂದಿಗೆ ಡಿಕೆ.ಶಿವಕುಮಾರ್.
ಬಿಜೆಪಿ ನಾಯಕರೊಂದಿಗೆ ಡಿಕೆ.ಶಿವಕುಮಾರ್.
Updated on

ಬೆಂಗಳೂರು: ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ, ಬಸವನಗೌಡ ಪಾಟೀಲ್ ಯತ್ನಾಶ್, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಹ್ಯಾಂಡ್ ಶೇಕ್ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು.

ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ಅಲ್ಲದೆ, ವಿಪಕ್ಷ ಸದಸ್ಯರ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಫೋಟೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com