ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ

ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.
ಬಸವಣ್ಣ
ಬಸವಣ್ಣ

ಬೆಂಗಳೂರು: ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶ್ರೀಕೃಷ್ಣ ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯ ಪ್ರಕಾರ, ಪ್ರತಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಜಯಂತಿಗಳನ್ನು ಆಯೋಜಿಸಲು 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ (ಡಿಸಿ) ಸರ್ಕಾರ ಅಧಿಕಾರ ನೀಡಿದೆ.

ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಯಂತಿಗಳನ್ನು ಆಯೋಜಿಸಲು 50 ಸಾವಿರ ಹಾಗೂ ತಾಲೂಕು ಮಟ್ಟದಲ್ಲಿ 20 ಸಾವಿರ ರೂ.ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com