social_icon

ಜೇನು ಸಾಕಾಣಿಕೆ ಮಾಡುವ ಬುಡಕಟ್ಟು ಕುಟುಂಬಗಳಿಗೆ ನೆರವು: ಯೋಜನೆ ರೂಪಿಸಿ ಜೇನುತುಪ್ಪ ಮಾರಾಟ ಮಾಡಲು ಅರಣ್ಯ ಇಲಾಖೆ ಮುಂದು!

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ.

Published: 31st May 2023 01:59 PM  |   Last Updated: 31st May 2023 05:43 PM   |  A+A-


Director of Kali Tiger Reserve Maria Christu Raja hands over a certificate to a beneficiary.

ಫಲಾನುಭವಿಗೆ ಪ್ರಮಾಣಪತ್ರ ಹಸ್ತಾಂತರಿಸುತ್ತಿರುವ ಕಾಳಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ.

Posted By : Manjula VN
Source : The New Indian Express

ಹುಬ್ಬಳ್ಳಿ: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ.

ಯೋಜನೆ ಮೂಲಕ ಜೇನು ಉತ್ಪಾದನೆಯಲ್ಲಿ ಸ್ಥಳೀಯರನ್ನು ತೊಡಗಿಸಿಕೊಳ್ಳುವ ಅಧಿಕಾರಿಗಳು, ಇನ್ನು ಕೆಲವೇ ತಿಂಗಳುಗಳಲ್ಲಿ ಇಲಾಖೆಯ ಮೂಲಕ ಶುದ್ಧ ಜೇನುತುಪ್ಪವನ್ನು ಮಾರುಕಟ್ಟೆಗೆ ತರುವ ಪ್ರಯತ್ನ ನಡೆಸುತ್ತಿದೆ.

ಯೋಜನೆಯಡಿಯಲ್ಲಿ 60 ಬುಡಕಟ್ಟು ಕುಟುಂಬಗಳನ್ನು ಆಯ್ಕೆ ಮಾಡಿರುವ ಅಧಿಕಾರಿಗಳು, ಈ ಕುಟುಂಬಕ್ಕೆ ಜೇನು ಪೆಟ್ಟಿಗೆ ನೀಡಿದೆ. ಜೇನು ಕೃಷಿಕರು ಮತ್ತು ತೋಟಗಾರಿಕಾ ತಜ್ಞರ ತಂಡವು ಇವರಿಗೆ ಜೇನುಸಾಕಣೆ, ಜೇನು ಉತ್ಪಾದನೆ ಮತ್ತು ಪ್ಯಾಕಿಂಗ್‌ ಕುರಿತು ತರಬೇತಿಗಳನ್ನು ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟಗಳ ಮಧ್ಯಭಾಗದಲ್ಲಿರುವ ಈ ಮೀಸಲು ಪ್ರದೇಶದಲ್ಲಿ ನೂರಾರು ಕುಟುಂಬಗಳು ವಾಸ ಮಾಡುತ್ತಿವೆ. ಇದೊಂದು ಕುಗ್ರಾಮವಾಗಿದ್ದು, ಈ ಕುಗ್ರಾಮಕ್ಕೆ ಆಧುನಿಕ ಪ್ರಪಂಚದ ಸಂಪರ್ಕವಿಲ್ಲದಂತಾಗಿದೆ. ಇಲ್ಲಿ ಉತ್ಪತ್ತಿಯಾಗುವ ಜೇನುತುಪ್ಪವು ವಿಶಿಷ್ಟವಾದ ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನೂ ಓದಿ: ನೀವು ಬಳಸುತ್ತಿರುವ ಜೇನುತುಪ್ಪ ಶುದ್ಧವಾಗಿದೆಯೇ..? ಪರೀಕ್ಷಿಸಲು ಬರುತ್ತಿದೆ ಪ್ರಯೋಗಾಲಯಗಳು!

ಇದನ್ನು ಅರಿತ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಇತ್ತೀಚೆಗೆ ಸ್ವಯಂ ಹೆಸರಿನ ಕಾರ್ಯಕ್ರಮವೊಂದನ್ನು ಆರಂಭಿಸಿದ್ದು, ಅದರ ಅಡಿಯಲ್ಲಿ ಜೇನು ಮಾರಾಟ ಯೋಜನೆಯನ್ನೂ ಕೈಗೆತ್ತಿಕೊಳ್ಳಲು ಮುಂದಾಗಿದೆ.

ಯೋಜನೆಯಿಂದಾಗಿ ಬುಡಕಟ್ಟು ಕುಟುಂಬಗಳ ಆದಾಯವನ್ನು ಸುಧಾರಿಸಲಿದೆ ಎಂದು ಕಾಳಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ನಿರ್ದೇಶಕ ಮರಿಯಾ ಕ್ರಿಸ್ತು ರಾಜಾ ಅವರು ಹೇಳಿದ್ದಾರೆ.

ಇಲ್ಲಿ ಬಹುತೇಕ ಬುಡುಕಟ್ಟು ಜನರು ಕಾಡು ಜೇನು ತೆಗೆಯುವುದು, ಜೇನುನೊಣಗಳ ನಿಭಾಯಿಸುವುದು ಹೇಗೆ ಎಂಬುದನ್ನು ತಿಳಿದಿದ್ದಾರೆ. ಈ ಕಾರ್ಯಕ್ರಮವು ಸಮುದಾಯಕ್ಕೆ ಲಾಭಕರವಾಗಿರಲಿದೆ ಎಂದು ತಿಳಿಸಿದ್ದಾರೆ.

ಆಸಕ್ತಿಯುಳ್ಳ ಕುಟುಂಬಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕುಟುಂಬಗಳಿಗೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ವೃತ್ತಿಪರ ಜೇನುಸಾಕಣೆದಾರರಿಂದ 2 ದಿನಗಳ ಕಾಲ ತರಬೇತಿ ನೀಡಲಾಗಿದೆ. ಈ ಯೋಜನೆ ಯಶಸ್ವಿಯಾಗಿದ್ದೇ ಆದರೆ, ಇತರೆ ಪ್ರದೇಶಗಳಿಗೂ ವಿಸ್ತರಿಸುವ ಚಿಂತನೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಳ್ಳಿಯ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ: ಈ ಲಾರಿ ಚಾಲಕರ ಶ್ಲಾಘನೀಯ ಸೇವೆ ಇತರರಿಗೂ ಮಾದರಿ!

ಡಿಗ್ಗಿ, ಕುಂಬಾರವಾಡ ಮತ್ತು ಅಣಶಿ ಎಂಬ ಪ್ರದೇಶದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಯೋಜನೆಯಿಂದಾಗಿ ಮುಂದಿನ ದಿನಗಳಲ್ಲಿ ಜೇನು ಸಾಕಾಣಿಕೆಗೆ ಕುಟುಂಬಗಳು ಮತ್ತಷ್ಟು ಜೇನು ಪೆಟ್ಟಿಗೆಗಳನ್ನು ಖರೀಸಲು ಸಾಧ್ಯವಾಗಲಿದೆ. ಜೇನುತುಪ್ಪ ಉತ್ಪಾದಕರಿಗೆ ಗರಿಷ್ಠ ಲಾಭವನ್ನು ನೀಡಲಾಗುವುದು, ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಮೇಲ್ವಿಚಾರಣೆಯನ್ನು ಮಾಡಲಾಗುವುದು ಎಂದು ತೋಟಗಾರಿಕಾ ಇಲಾಖೆಯ ತರಬೇತುದಾರರು ಮಾಹಿತಿ ನೀಡಿದ್ದಾರೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp