ಬೆಂಗಳೂರು: 18 ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಎಂಬಿಎ ಪದವೀಧರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಹೈದರಾಬಾದ್ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದ್ದು, ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಆತ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಸಂತ್ರಸ್ತರಿಗೆ ವಂಚಿಸಿ ಪರಾರಿಯಾಗಿದ್ದ ಶರತ್ ಗೌಡನನ್ನು ಸಂಜಯನಗರ ಪೊಲೀಸರು ಹೈದರಾಬಾದ್ನಲ್ಲಿ ಬಂಧಿಸಿ ಕರೆತಂದಿದ್ದಾರೆ. ಆರೋಪಿ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡಿದ್ದಾನೆ.
ಕೇರಳದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಆತ 12 ಲಕ್ಷ ರೂಪಾಯಿ ತೆಗೆದುಕೊಂಡಿರುವುದಾಗಿ ಸಂತ್ರಸ್ತರೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಬಳಿಕ ಕಚೇರಿ ಬಂದ್ ಮಾಡಿ ಆತ ಪರಾರಿಯಾಗಿದ್ದನು. ಸದ್ಯ ಆರೋಪಿಯಿಂದ ಪೊಲೀಸರು 47.8 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Advertisement