ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಸ್ಕೂಟರ್ ಡಿಕ್ಕಿ ಹೊಡೆದು 74 ವರ್ಷದ ವ್ಯಕ್ತಿ ಸಾವು
ಬೆಂಗಳೂರಿನ ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿ ಔಷಧಿ ಖರೀದಿಸಿ ಮನೆಗೆ ಮರಳುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿ ಔಷಧಿ ಖರೀದಿಸಿ ಮನೆಗೆ ಮರಳುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ 9.50ರ ಸುಮಾರಿಗೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮಂದಿರ ಆಟದ ಮೈದಾನದ ಬಳಿ ಈ ಘಟನೆ ನಡೆದಿದೆ.
ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮೃತ ಕಮಲ್ ರಾವ್ ಅವರು ಔಷಧಿ ಖರೀದಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾರೆ. ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾರಿಹೋಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಅವರನ್ನು ನಿಮ್ಹಾನ್ಸ್ಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ