ಮನುಷ್ಯ-ಪ್ರಾಣಿ ಸಂಘರ್ಷ: ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಈಶ್ವರ್ ಖಂಡ್ರೆ ಮನವಿ!

ಹೊಲಗಳಿಗೆ ನೀರುಣಿಸುವಾಗ ಸಂಭವಿಸಬಹುದಾದ ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗಟ್ಟಲು ಹಗಲಿನಲ್ಲಿ ಅರಣ್ಯಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಿಗೆ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Updated on

ಬೆಂಗಳೂರು: ಹೊಲಗಳಿಗೆ ನೀರುಣಿಸುವಾಗ ಸಂಭವಿಸಬಹುದಾದ ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗಟ್ಟಲು ಹಗಲಿನಲ್ಲಿ ಅರಣ್ಯಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಿಗೆ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ನೀರಿನ ಪಂಪ್‌ಸೆಟ್‌ಗಳನ್ನು ಚಲಾಯಿಸಲು ಅಗತ್ಯವಿರುವ ತ್ರಿಫೇಸ್ ವಿದ್ಯುತ್ ಅನ್ನು ರಾತ್ರಿ ಸಮಯದಲ್ಲಿ ಗ್ರಾಮಸ್ಥರಿಗೆ ಸರಬರಾಜು ಮಾಡಲಾಗುತ್ತಿದ್ದು, ಇದರಿಂದ ರೈತರು ಚಿರತೆ, ಹುಲಿ, ಆನೆ ಸೇರಿದಂತೆ ವನ್ಯಜೀವಿಗಳ ದಾಳಿಗೆ ಆಗಾಗ್ಗೆ ಒಳಗಾಗುತ್ತಿದ್ದಾರೆ ಎಂದು ಖಂಡ್ರೆ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇಂತಹ ಗ್ರಾಮಗಳಿಗೆ ರಾತ್ರಿ ಸಮಯದಲ್ಲಿ ತ್ರಿಫೇಸ್ ವಿದ್ಯುತ್ ನೀಡದಂತೆ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರಿಗೆ ಪತ್ರ ಬರೆದಿದ್ದಾರೆ. ಪಂಪ್ ಸೆಟ್‌ಗಳನ್ನು ನಿರ್ವಹಿಸಲು ರೈತರು ತಮ್ಮ ಹೊಲಗಳಿಗೆ ತೆರಳಿದಾಗ ಕಾಡು ಪ್ರಾಣಿಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com