ಸಚಿವ ಜಮೀರ್ ಅಹ್ಮದ್ ಖಾನ್
ರಾಜ್ಯ
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್'ಗೆ ಹಿನ್ನಡೆ, ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿನ್ನೆಡೆಯುಂಟಾಗಿದೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿನ್ನೆಡೆಯುಂಟಾಗಿದೆ.
ಪ್ರಕರಣ ಸಂಬಂಧ ಎಸಿಬಿ ಜಮೀರ್ ಅವರ ವಿರುದ್ಧ ದಾಖಲಿಸಿಕೊಂಡದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಹೈಕೋರ್ಟ್ ಶನಿವಾರ ನಿರಾಕರಿಸಿದೆ.
80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಜಮೀರ್ ಅಹ್ಮದ್ ಕೋರಿದ್ದರು.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್ಐಆರ್ ದಾಖಲಿಸಿತ್ತು. ಜಮೀರ್, ಆದಾಯ ಮೀರಿ 80 ಕೋಟಿಗೂ ಹೆಚ್ಚು ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ಆರೋಪಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ