ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು!
ಕರ್ನಾಟಕದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
Published: 20th November 2023 03:21 PM | Last Updated: 20th November 2023 08:17 PM | A+A A-

ಡಿಕೆ ಶಿವಕುಮಾರ್ ಭೇಟಿಯಾದ ಶ್ರೀರಾಮುಲು
ಬೆಂಗಳೂರು: ಕರ್ನಾಟಕದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಈ ಕ್ರಮವು ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶ್ರೀರಾಮುಲು ಅವರು ಅಸಮಾಧಾನಗೊಳ್ಳುವಂತೆ ಮಾಡಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಶ್ರೀರಾಮುಲು ಅವರು ತಮ್ಮ ಮಗಳ ಮದುವೆಗೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿ, ಜನವರಿ ನಂತರ ಮುಂದಿನ ಪ್ರಕ್ರಿಯೆ ಆರಂಭ: ಲಕ್ಷ್ಮಣ್ ಸವದಿ
ಶ್ರೀರಾಮುಲು ಅವರು ರಾಜ್ಯದ ಹಿಂದಿನ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರ ಆಗಸ್ಟ್ 4 ರಿಂದ 2023ರ ಮೇ 13ರವರೆಗೆ ಸಾರಿಗೆ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 2020ರ ಅಕ್ಟೋಬರ್ 12 ರಿಂದ 2021ರ ಜುಲೈ 26ರವರೆಗೆ ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಶ್ರೀರಾಮುಲು ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುವುದಾಗಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.