ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು: ಪ್ರಕರಣದ ತನಿಖೆಗೆ ನಾಲ್ಕು ತಂಡಗಳ ರಚನೆ: ಸಚಿವ ಕೆಜೆ ಜಾರ್ಜ್

ಬೆಂಗಳೂರು ನಗರದ ಹೊರವಲಯದಲ್ಲಿರುವ ವೈಟ್‌ಫೀಲ್ಡ್‌ನಲ್ಲಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಮಂಗಳವಾರ ತಿಳಿಸಿದ್ದಾರೆ.
ಕೆಜೆ ಜಾರ್ಜ್
ಕೆಜೆ ಜಾರ್ಜ್
Updated on

ಬೆಂಗಳೂರು: ನಗರದ ಹೊರವಲಯದಲ್ಲಿರುವ ವೈಟ್‌ಫೀಲ್ಡ್‌ನಲ್ಲಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಮಂಗಳವಾರ ತಿಳಿಸಿದ್ದಾರೆ.

ಆಘಾತಕಾರಿ ಘಟನೆಯಲ್ಲಿ, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 23 ವರ್ಷದ ಮಹಿಳೆ ಮತ್ತು ಆಕೆ ಎತ್ತುಕೊಂಡಿದ್ದ ಮಗು ಭಾನುವಾರ ಮುಂಜಾನೆ ಸಜೀವ ದಹನವಾಗಿದ್ದರು.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಒಂದು ತಂಡ, ಪೊಲೀಸರ ಇನ್ನೊಂದು ತಂಡ, ರಾಜ್ಯ ವಿದ್ಯುತ್ ಇಲಾಖೆಯಿಂದ ಮೂರನೇ ತಂಡ ಮತ್ತು ಸ್ವತಂತ್ರ ಸಂಸ್ಥೆಯಾಗಿರುವ ನಾಲ್ಕನೇ ತಂಡ ಸಾವಿನ ತನಿಖೆ ನಡೆಸಲಿದೆ ಎಂದು ಜಾರ್ಜ್ ಹೇಳಿದರು.

'ನಾವು ನಾಲ್ಕು ತಂಡಗಳಿಂದ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಘಟನೆಗೆ ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಮತ್ತು ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ' ಎಂದು ಅವರು ಹೇಳಿದರು.

ಅಂತಹ ಕೇಬಲ್‌ಗಳಿಗೆ ಪ್ರತ್ಯೇಕವಾಗಿ ಡಕ್ಟ್‌ಗಳನ್ನು ಹೊಂದಿರುವ ರಸ್ತೆಗಳಲ್ಲಿ ಯಾವುದೇ ತೂಗಾಡುವ ತಂತಿಗಳು ಇರದಂತೆ ನೋಡಿಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

15 ದಿನಗಳಲ್ಲಿ ಟೆಲಿಕಾಂ ಕಂಪನಿಗಳು ತಮ್ಮ ಓವರ್‌ಹೆಡ್ ವೈರ್‌ಗಳನ್ನು ಡಕ್ಟ್‌ಗಳಿಗೆ ಸ್ಥಳಾಂತರಿಸಬೇಕಾಗುತ್ತದೆ. ವಿಫಲವಾದರೆ ವಿದ್ಯುತ್ ಇಲಾಖೆ ಅವುಗಳನ್ನು ತೆಗೆದುಹಾಕುತ್ತದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಸೇರಿದಂತೆ ಬೆಸ್ಕಾಂನ ಐವರು ನೌಕರರನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com