social_icon

ವನ್ಯಜೀವಿಗಳ ಸಂರಕ್ಷಣೆಗಾಗಿ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲರ ಚಾಲನೆ

ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾನುವಾರ ರಾಜಭವನದಲ್ಲಿ ಚಾಲನೆ ನೀಡಿದರು.

Published: 02nd October 2023 12:25 PM  |   Last Updated: 02nd October 2023 01:35 PM   |  A+A-


Vintage cars participate in the drive for wildlife from Raj Bhavan to Bannerghatta in Bengaluru on Sunday.

ರಾಜಭವನದಿಂದ ಬನ್ನೇರುಘಟ್ಟದವರೆಗೆ ಭಾನುವಾರ ನಡೆದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನದಲ್ಲಿ ವಿಂಟೇಜ್ ಕಾರುಗಳು ಭಾಗವಹಿಸಿದ್ದವು.

Posted By : Manjula VN
Source : The New Indian Express

ಬೆಂಗಳೂರು: ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾನುವಾರ ರಾಜಭವನದಲ್ಲಿ ಚಾಲನೆ ನೀಡಿದರು.

ಅರಣ್ಯ ಇಲಾಖೆ 69ನೇ ವನ್ಯಜೀವಿ ಸಪ್ತಾಹ-2023ದಡಿ ವನ್ಯಜೀವಿ ಸಂರಕ್ಷಣೆಯಲ್ಲಿ ಪಾಲುದಾರಿಕೆ ಧ್ಯೇಯ ವಾಕ್ಯದಡಿ ವಿವಿಧ ಕಾರ್ಯಕ್ರಮ ಆಯೋಜಿಸಿದ್ದು, ಜನಜಾಗೃತಿಗಾಗಿ ವಿಂಟೇಜ್ ವಾಹನ ಯಾನ ಹಮ್ಮಿಕೊಂಡಿತ್ತು.

ವಿಂಟೇಜ್ ವಾಹನ ಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ರಾಜ್ಯಪಾಲರು, ಪ್ರಾಚೀನ ಗ್ರಂಥಗಳಲ್ಲಿ ಪ್ರಾಣಿಗಳ ರಕ್ಷಣೆ ಮತ್ತು ಸಂರಕ್ಷಣೆ ಕುರಿತು ಉಲ್ಲೇಖವಿದೆ. ಮಾನವರು ಮತ್ತು ವನ್ಯಜೀವಿಗಳು ಯುಗ ಯುಗಗಳಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ, ಇಂದು ಈ ವನ್ಯಜೀವಿಗಳ ಸಂರಕ್ಷಣೆಯ ಅವಶ್ಯಕತೆಯಿದೆ. ವನ್ಯಜೀವಿಗಳನ್ನು ಸಂರಕ್ಷಿಸಲು, ಕಾಡುಗಳು ಸಮೃದ್ಧವಾಗಿರುವುದು ಬಹಳ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿ: ತನಿಖೆ ಆರಂಭ

ಕರ್ನಾಟಕದ ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇಡೀ ದೇಶದಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯ ಅಗ್ರ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿಶೇಷವಾಗಿ ಅರಣ್ಯ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

’ಪರಿಸರ ಸಂರಕ್ಷಣಾ ಕಾಯಿದೆ’, ’ಅರಣ್ಯ ಸಂರಕ್ಷಣಾ ಕಾಯ್ದೆ’, ’ರಾಷ್ಟ್ರೀಯ ವನ್ಯಜೀವಿ ಕ್ರಿಯಾ ಯೋಜನೆ’, ’ಪ್ರಾಜೆಕ್ಟ್ ಹುಲಿ’, ’ರಾಷ್ಟ್ರೀಯ ಉದ್ಯಾನಗಳು ಮತ್ತು ಅಭಯಾರಣ್ಯಗಳು’, ’ಭಾರತದಲ್ಲಿ ಅರಣ್ಯಗಳು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಜೈವಿಕ-ಪ್ರಾದೇಶಿಕ ಮೀಸಲು ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ಯೋಜನೆಗಳಿಂದಾಗಿ ಕೆಲವು ಜಾತಿಗಳ ಅಳಿವಿನಂಚಿನಿಂದ ಉಳಿಸಲಾಗಿದೆ ಎಂದು ತಿಳಿಸಿದರು.

69ನೇ ವನ್ಯಜೀವಿ ಸಪ್ತಾಹದ ಪ್ರಾರಂಭದ ಸಂದರ್ಭದಲ್ಲಿ ವನ್ಯಜೀವಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಭಾರತೀಯ ವಿಂಟೇಜ್ ವಾಹನಗಳ ಒಕ್ಕೂಟದ ಸಹಯೋಗದೊಂದಿಗೆ ಅರಣ್ಯ ಇಲಾಖೆಯು ಈ ಡ್ರೈವ್ ಆಯೋಜಿಸಿರುವುದು ಉತ್ತಮ ಕಾರ್ಯವಾಗಿದೆ. ಈ ವಿಂಟೇಜ್ ವಾಹನ ಯಾನ ವನ್ಯಜೀವಿ ಸಂರಕ್ಷಣೆಯ ಕಡೆಗೆ ಸಕಾರಾತ್ಮಕ ಕೆಲಸ ಸ್ಫೂರ್ತಿ ನೀಡಲಿ ಎಂದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp