social_icon

ಶಿವಮೊಗ್ಗದಲ್ಲಿ ಒಂದು ಸಣ್ಣ ಗಲಭೆ ಆಗಿದೆ, ಅಹಿತಕರ ಘಟನೆ ನಡೆಯುವ ಮಾಹಿತಿಯಿತ್ತು, ಹೀಗಾಗಿ ಪೊಲೀಸ್ ಭದ್ರತೆ ಒದಗಿಸಿದ್ದೆವು: ಗೃಹ ಸಚಿವ ಪರಮೇಶ್ವರ್

ಶಿವಮೊಗ್ಗ ಹೊರವಲಯದ ಶಾಂತಿನಗರ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಸಣ್ಣ ಗಲಭೆಯಾಗಿದೆ, ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಇಂದು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

Published: 02nd October 2023 11:13 AM  |   Last Updated: 02nd October 2023 11:56 AM   |  A+A-


Dr G Parameshwar

ಡಾ ಜಿ ಪರಮೇಶ್ವರ್

Posted By : Sumana Upadhyaya
Source : Online Desk

ಬೆಂಗಳೂರು: ಶಿವಮೊಗ್ಗ ಹೊರವಲಯದ ಶಾಂತಿನಗರ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಸಣ್ಣ ಗಲಭೆಯಾಗಿದೆ, ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಇಂದು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಘಟನೆಯೇನು ಹೊಸದಲ್ಲ, ಈ ಹಿಂದೆಯೂ ಇಂತಹ ಘಟನೆಯಾಗಿವೆ. ನಮ್ಮ ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ನಮಗೆ ಮೊದಲೇ ಮಾಹಿತಿಯಿತ್ತು. ಹೀಗಾಗಿ ಮೊದಲೇ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು. ಮೆರವಣಿಗೆ ಹೋಗುವ ಸಂದರ್ಭದಲ್ಲಿ ಯಾವುಗೇ ಅಹಿತಕರ ಘಟನೆ ನೀಡಬಹುದು ಎಂದು ನಮಗೆ ಮೊದಲೇ ಗೊತ್ತಿತ್ತು, ದೊಡ್ಡ ಮಟ್ಟದಲ್ಲಿ ಆಗುವ ಗಲಭೆಯನ್ನು ಸಮರ್ಥರಾಗಿರುವ ನಮ್ಮ ಪೊಲೀಸರು ನಿಯಂತ್ರಣ ಮಾಡಿದ್ದಾರೆ ಎಂದರು.

ಪೋಲೀಸರು ದೊಡ್ಡ ಪ್ರಮಾಣದ ಗಲಾಟೆ ತಪ್ಪಿಸಿದ್ದಾರೆ. ಎರಡೂ ಗುಂಪಿನ ನಾಲ್ಕು ಜನರನ್ನು ಬಂಧಿಸಿದ್ದಾರೆ. ಬ್ಯಾನರ್ ಕಟ್ತಾರೆ, ಪೋಸ್ಟರ್ ಹಾಕ್ತಾರೆ. ಇದನ್ನು ಕೆಲವರು ಅಡ್ವಾಂಟೇಜ್‌ ಆಗಿ ತಗೋತಾರೆ ಎಂದರು. ಶಿವಮೊಗ್ಗದ ಘಟನೆಗೆ ಕಾರಣ ಏನು ಎಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ  ಎಂದು ಹೇಳಿದ ಪರಮೇಶ್ವರ್‌ ಅವರು, ಶಿವಮೊಗ್ಗದಲ್ಲಿ ಕಲ್ಲು ತೂರಾಟ ಮಾಡಿದರು ಎಂಬ ಮಾಹಿತಿ ಇದೆ. ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ ಎಂದು ಹೇಳಿದರು.

ಹೊರಗಿನಿಂದ ಯಾರನ್ನೂ ಬರಲು ಬಿಟ್ಟಿಲ್ಲ: ಶಿವಮೊಗ್ಗದಲ್ಲಿ ನಡೆದ ಗಲಭೆಯಲ್ಲಿ ಹೊರಗಿನಿಂದ ಬಂದವರ ಕೈವಾಡವಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ನಾವು ಎಲ್ಲಾ ರೋಡ್ ಗಳನ್ನು ರೆಗ್ಯುಲೇಟ್ ಮಾಡಿದ್ದೇವೆ. ಏನಾಗಿದೆ ಎಂದು ನಮಗೆ ಗೊತ್ತಿದೆ, ಹೇಳಿಕೆ ಕೊಡುವವರು ಕೊಡ್ತಾರೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಗಲಭೆ ಕೇಸಿ​ನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ, ಶಾಂತಿನಗರದಲ್ಲಿ ಪೊಲೀಸ್ ಹೈಅಲರ್ಟ್ ಆಗಿದ್ದಾರೆ. ಶಾಂತಿನಗರದ ಮುಖ್ಯ ರಸ್ತೆಯಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್ ಸವಾರ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್​​ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ​​


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp