ಟಿವಿ ರಿಮೋಟ್‌ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್‌ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಟಿವಿ ರಿಮೋಟ್‌ಗಾಗಿ ನಡೆದ ಜಗಳದಲ್ಲಿ ತಂದೆ ಎಸೆದ ಕತ್ತರಿ ಗಂಟಲು ಸೀಳಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಬಾಲಕನ ಗಂಟಲಿಗೆ ಕತ್ತರಿ ಚುಚ್ಚಿದ್ದು, ರಕ್ತಸ್ರಾವವಾಗಿ ಆತ ಸಾವನ್ನಪ್ಪಿದ್ದಾನೆ. ಮೃತನನ್ನು ಆರೋಪಿ ಲಕ್ಷ್ಮಣ್ ಬಾಬುರ ಹಿರಿಯ ಪುತ್ರ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ ಮತ್ತು ಆತನ ಸಹೋದರ ಪವನ್ ಕುಮಾರ್(14) ಟಿವಿ ಶೋ ವೀಕ್ಷಿಸಲು ರಿಮೋಟ್ ಗಾಗಿ ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಪಾರ್ಶ್ವವಾಯು ರೋಗಿಯ ಲಕ್ಷ್ಮಣ್ ಬಾಬು ಚಂದ್ರಶೇಖರ್ ಮೇಲೆ ಕತ್ತರಿ ಎಸೆದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ನನ್ನು ಆತನ ತಾಯಿ ಲಕ್ಷ್ಮಿ ಮೊಳಕಾಲ್ಮೂರಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿನ ವೈದ್ಯರು ಚಂದ್ರಶೇಖರ್ ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದರು.

ಬಳ್ಳಾರಿಗೆ ತೆರಳುವ ಮಾರ್ಗ ಮಧ್ಯೆ ಚಂದ್ರಶೇಖರ್ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಕ್ಷ್ಮಣ್ ಬಾಬು ಅವರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com