ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿ ಕೊಲೆ; ಇಬ್ಬರು ಆರೋಪಿಗಳ ಬಂಧನ

ಇತ್ತೀಚೆಗಷ್ಟೇ ದೊಡ್ಡ ಬಾಣಸವಾಡಿಯಲ್ಲಿ 35 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಇತ್ತೀಚೆಗಷ್ಟೇ ದೊಡ್ಡ ಬಾಣಸವಾಡಿಯಲ್ಲಿ 35 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಚಿಕ್ಕ ಬಾಣಸವಾಡಿ ನಿವಾಸಿಗಳಾದ 28 ವರ್ಷದ ಹೃತಿಕ್ ಕುಮಾರ್ ಮತ್ತು ಸುಮನ್ ಎಂದು ಗುರುತಿಸಲಾಗಿದೆ.

ಒಎಂಬಿಆರ್ ಲೇಔಟ್ ನಿವಾಸಿ ಮದನ್ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಮದನ್ ಅವರು ಬುಧವಾರ ಸಲೂನ್‌ಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆ ವೇಳೆ ಸುಳಿವುಗಳನ್ನು ಆಧರಿಸಿ ಪೊಲೀಸರು ಹೃತಿಕ್ ಕುಮಾರ್ ಹಾಗೂ ಸುಮನ್ ಅವರನ್ನು ಬಂಧಿಸಿದ್ದಾರೆ.

"2019 ರಲ್ಲಿ, ಮದನ್, ಆರೋಪಿ ಹೃತಿಕ್ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಹೃತಿಕ್ ಕೆಲಕಾಲ ಕೋಮಾಕ್ಕೆ ಜಾರಿದ್ದ. ಚಿಕಿತ್ಸೆಗಾಗಿ ಸಾಕಷ್ಟು ಹಣ ಖರ್ಚಾಗಿತ್ತು. ಚೇತರಿಸಿಕೊಂಡಿದ್ದ ಹೃತಿಕ್ ಮದನ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಆದರೆ, ಘಟನೆ ಬಳಿಕ ಮದನ್ ಚೆನ್ನೈಗೆ ಸ್ಥಳಾಂತರಗೊಂಡಿದ್ದ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮದನ್ ನಗರಕ್ಕೆ ವಾಪಸ್ಸಾಗಿದ್ದ. ಈ ವಿಚಾರ ತಿಳಿದ ಹೃತಿಕ್ ಹಳೆ ದ್ವೇಷ ಮರೆತು ಮತ್ತೆ ಒಂದಾಗೋಣ ಎಂದು ಹೇಳಿ ಮಾತುಕತೆಗಾಗಿ ಅಕ್ಟೋಬರ್​ 11ರ ಸಂಜೆ ಕರೆಸಿಕೊಂಡಿದ್ದಾನೆ. ಮಾತುಕತೆ ವೇಳೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದೆ, ನೋಡ ನೋಡುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com