ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು, ಮೃತರ ಸಂಖ್ಯೆ 17ಕ್ಕೆ ಏರಿಕೆ

ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅ.7ರಂದು ಸಂಭವಿಸಿದ ಅಗ್ನಿ ದುರಂತ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕ ಬುಧವಾರ ಮೃತಪಟ್ಟಿದ್ದು, ಇದರೊಂದಿಗೆ ದುರಂತದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅ.7ರಂದು ಸಂಭವಿಸಿದ ಅಗ್ನಿ ದುರಂತ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕ ಬುಧವಾರ ಮೃತಪಟ್ಟಿದ್ದು, ಇದರೊಂದಿಗೆ ದುರಂತದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.

ದುರಂತ ನಡೆದ ದಿನ ಪಟಾಕಿ ಗೋದಾಮಿನಿಂದ 13 ಶವಗಳನ್ನು ಹೊರ ತೆಗೆಯಲಾಗಿತ್ತು. ಆ ಬಳಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದರೆ, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ  ಅ.7ರಂದು ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದರು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com