social_icon

ಕರ್ನಾಟಕ, ತಮಿಳುನಾಡು ಸೇರಿ 4 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್​ಐಎ ದಾಳಿ: ಡಿಜಿಟಲ್ ಸಾಧನ ವಶ

ರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್‌ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ.

Published: 02nd September 2023 09:29 AM  |   Last Updated: 02nd September 2023 09:30 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : Express News Service

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್‌ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ.

ಭಾರತದಲ್ಲಿ ಭಯೋತ್ಪಾದನೆ ಹರಡುವ ಸಲುವಾಗಿ ದೇಶದಲ್ಲಿ ಯುವಕರನ್ನು ನೇಮಿಸಿ ಉಗ್ರಗಾಮಿಗಳನ್ನಾಗಿಸಲು ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಮತ್ತು ತೆಹರಿಕ್-ಇ-ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ಎನ್​ಐಎ ಗುರುವಾರ ಈ ದಾಳಿಗಳನ್ನು ನಡೆಸಿದೆ.

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಅನೇಕ ದಾಳಿಗಳಲ್ಲಿ ಹಲವನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದು ಸ್ಥಳದಲ್ಲಿ ಶೋಧದ ಸಮಯದಲ್ಲಿ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲು ಮತ್ತು ಈ ಎರಡು ಭಯೋತ್ಪಾದಕ ಸಂಘಟನೆಗಳ ಕಾನೂನುಬಾಹಿರ ಹಾಗೂ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯಲು ಸಲುವಾಗಿ ಎನ್ಐಎ ಈ ಸಾಧನಗಳನ್ನು ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಎರಡು ಭಯೋತ್ಪಾದನೆ ಸಂಬಂಧಿ ಕೇಸುಗಳು: ಜಮ್ಮು-ಕಾಶ್ಮೀರದ 15 ಸ್ಥಳಗಳಲ್ಲಿ ಎನ್ ಐಎ ದಾಳಿ

ಈ ನಿಷೇಧಿತ ಸಂಘಟನೆಗಳಿಂದ ಈ ಹಿಂದೆ ನೇಮಕಗೊಂಡ ಇಬ್ಬರು ಆರೋಪಿಗಳ ವಿರುದ್ಧ 2023ರ ಏಪ್ರಿಲ್​​ನಲ್ಲಿ ದಾಖಲಾದ ಪ್ರಕರಣದ ಎನ್ಐಎ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ. ಅಫ್ಘಾನಿಸ್ತಾನದಲ್ಲಿ ಭೂಮಿ ಖರೀದಿಸಲು ವಿದೇಶಕ್ಕೆ ಹಣ ವರ್ಗಾವಣೆ ಸೇರಿದಂತೆ ಭಯೋತ್ಪಾದಕ ಸಂಬಂಧಿತ ಸರಣಿ ಚಟುವಟಿಕೆಗಳಲ್ಲಿ ಆ ಇಬ್ಬರೂ ಭಾಗಿಯಾಗಿದ್ದರು.

ಅವರಿಬ್ಬರು ಭಾರತದಲ್ಲಿ ಸಕ್ರಿಯವಾಗಿರುವ ತಮ್ಮ ಭಯೋತ್ಪಾದಕ ರಂಗಗಳ ಚಟುವಟಿಕೆಗಳನ್ನು ಮುಂದುವರಿಸಲು ಯುವಕರನ್ನು ಈ ಎರಡು ಸಂಘಟನೆಗಳಿಗೆ ನೇಮಕಾತಿ ಮಾಡುವಲ್ಲಿ ಭಾಗಿಯಾಗಿದ್ದರು ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿತ್ತು. ಆ ಪಿತೂರಿಯು ಭಾರತದಲ್ಲಿ ಭಯೋತ್ಪಾದನೆ ಹರಡುವ, ಶಾಂತಿ ಮತ್ತು ಕೋಮು ಸೌಹಾರ್ದತೆ ಭಂಗಗೊಳಿಸುವ ಗುರಿ ಹೊಂದಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಕೇಸು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ, ದಾಖಲೆಗಳ ಪರಿಶೀಲನೆ

ಎಕ್ಯೂಐಎಸ್ ಭಾರತೀಯ ಉಪಖಂಡದಲ್ಲಿ ಇಸ್ಲಾಮಿಕ್ ರಾಜ್ಯ ಮತ್ತು ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸಲು ಶ್ರಮಿಸುತ್ತಿರುವ ಉಗ್ರಗಾಮಿ ಸಂಘಟನೆಯಾಗಿದ್ದರೆ, ತೆಹರಿಕ್-ಇ-ತಾಲಿಬಾನ್ ಅಫ್ಘಾನ್-ಪಾಕಿಸ್ತಾನ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಸ್ಲಾಮಿಕ್ ಸಶಸ್ತ್ರ ಉಗ್ರಗಾಮಿ ಗುಂಪುಗಳನ್ನು ಒಳಗೊಂಡ ಸಂಘಟನೆಯಾಗಿದೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp