social_icon

ಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆ

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು.

Published: 06th September 2023 10:00 AM  |   Last Updated: 06th September 2023 06:44 PM   |  A+A-


Ceremonial welcome to elephants at Mysuru palace

ಮೈಸೂರು ಅರಮನೆಯಲ್ಲಿ ಗಜಪಡೆಗೆ ಅದ್ದೂರಿ ಸ್ವಾಗತ

Posted By : Sumana Upadhyaya
Source : Online Desk

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು. ವಿಶೇಷವಾಗಿ ಅಲಂಕೃತಗೊಂಡಿದ್ದ ಆನೆಗಳನ್ನುಅರಮನೆ ಜಯಮಾರ್ತಾಂಡ ದ್ವಾರದಲ್ಲಿ ಸ್ವಾಗತಿಸಲಾಯಿತು. ದಸರೆ ಮುಗಿಯುವವರೆಗೂ ಆನೆಗಳು ಅರಮನೆ ಆವರಣದಲ್ಲಿ ತಂಗಲಿವೆ.

ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು. ವಾದ್ಯಗೋಷ್ಠಿ ಮೂಲಕ ಅರಮನೆಯತ್ತ ಗಜಪಡೆ ಕಾಲ್ನಡಿಗೆಯಲ್ಲಿ ತೆರಳಿತು. ಕ್ಯಾಪ್ಟನ್ ಅಭಿಮನ್ಯು ಹಾಗೂ ಗಡಪಡೆಯು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಆಗಮಿಸಿದ ವೇಳೆಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಜನಪದ ಕಲಾ ತಂಡದೊಂದಿಗೆ ನಗರದ ಅಶೋಕಪುರಂನ ಅರಣ್ಯ ಭವನದಿಂದ ಅರಮನೆಗೆ ಆಗಮಿಸಿದವು.

ಇದನ್ನೂ ಓದಿ: ಈ ವರ್ಷ 'ನಾದ ಬ್ರಹ್ಮ' ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಅಲಂಕಾರಗೊಂಡ ಗಜಪಡೆಯನ್ನು ಜನ ಕಣ್ತುಂಬಿಕೊಂಡರು. ಕಳೆದ ಸೆಪ್ಟೆಂಬರ್ 1ರಂದು ಈ ಗಜಪಡೆ ಹುಣಸೂರಿನ ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿದ್ದವು. ಅರಣ್ಯಭವನದಲ್ಲಿ ಆನೆಗಳು ವಾಸ್ತವ್ಯ ಹೂಡಿದ್ದವು. ಅರಣ್ಯ ಭವನದಿಂದ ಮೈಸೂರು ಅರಮನೆಗೆ ಬಂದ ಗಜಪಡೆಯನ್ನು ಮಧ್ಯಾಹ್ನ 12.01ರಿಂದ 12.51ರ ಸಮಯದ ಅಭಿಜನ್ ಲಗ್ನದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿಯು ಗಜಪಡೆಗೆ ಅದ್ದೂರಿ ಸ್ವಾಗತ ನೀಡಿದರು.

ದಸರಾಕ್ಕೆ ಮುನ್ನುಡಿ, ಪೊಲೀಸ್ ಭದ್ರತೆಯಲ್ಲಿ ಮೈಸೂರು ದಸರಾ ಗಜಪಡೆಗೆ ತೂಕ ಪರೀಕ್ಷೆ: ಇಂದು ಪೊಲೀಸ್ ಭದ್ರತೆಯಲ್ಲಿ ದೇವರಾಜ ಮೊಹಲ್ಲಾದಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಮೈಸೂರು ದಸರಾ ಗಜಪಡೆಗೆ ತೂಕ ಪರೀಕ್ಷೆ ಮಾಡಲಾಗಿದೆ. ಕ್ಯಾಪ್ಟನ್​ ಅಭಿಮನ್ಯು 5,160 ಕೆಜಿ, ವಿಜಯ ಆನೆ 2,830 ಕೆಜಿ ತೂಕ, ಭೀಮಾ 4,370 ಕೆಜಿ, ವರಲಕ್ಷ್ಮೀ 3,020 ಕೆಜಿ, ಕಂಜನ್ ಆನೆ 4,240 ಕೆಜಿ, ಮಹೇಂದ್ರ 4,530 ಕೆಜಿ, ಧನಂಜಯ 4,940 ಕೆಜಿ, ಗೋಪಿ 5,080 ಕೆಜಿ ತೂಕ ಇದೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp