social_icon

ದೇಶದ್ಯಾಂತ ಮುಂಗಾರು ಕಣ್ಣಮುಚ್ಚಾಲೆ; ಗಗನಕ್ಕೇರುತ್ತಿದೆ ಅಕ್ಕಿ ಬೆಲೆ: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯಕ್ಕೆ ಕುತ್ತು!

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ, ಆದರೆ ಈ ಯೋಜನೆಗೆ ಗಂಭೀರ ತೊಡಕು ಎದುರಾಗಿದೆ.

Published: 08th September 2023 11:13 AM  |   Last Updated: 08th September 2023 07:05 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ರಾಜ್ಯದ ಬಿಪಿಎಲ್‌ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು ಸಿದ್ದರಾಮಯ್ಯ ನೇತೃತ್ವ ಸರ್ಕಾರ ಮುಂದಾಗಿದೆ. ಆದರೆ, ಅನ್ನಭಾಗ್ಯ ಯೋಜನೆ ಜಾರಿಗೆ ಹಲವು ವಿಘ್ನಗಳು ಎದುರಾಗಿವೆ. ಆಹಾರ ಸಂಗ್ರಹಣೆ ತಜ್ಞರು ಪ್ರಮುಖವಾಗಿ ಎರಡು ಗಂಭೀರ ತೊಡಕುಗಳು ಅನ್ನಭಾಗ್ಯ ಯೋಜನೆಗೆ ಎದುರಾಗಿವೆ ಎಂದು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಅಕ್ಕಿ ಬೆಲೆಗಳು ಭಾರೀ ಏರಿಕೆಯಾಗಿದೆ. ಮತ್ತು ಖಾರಿಫ್ ಬೆಳೆ ಇಳುವರಿಯು ಗಣನೀಯ ಮಟ್ಟದಲ್ಲಿ ಕುಸಿಯುತ್ತಿದೆ.  ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರವಾಹ ಮತ್ತು ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ವಿಫಲವಾಗಿದ್ದು, ಅಕ್ಕಿ ಪೂರೈಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಈ ಎರಡು ಸಮಸ್ಯೆಗಳ ಜೊತೆ ಮತ್ತೊಂದು ಸಮಸ್ಯೆ ಏನೆಂದರೆ ಭತ್ತವನ್ನು ಹೆಚ್ಚು ಬೆಳೆಯುವ ತೆಲಂಗಾಣ, ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯಗಳು ಪಾರ್ಬಾಯಿಲ್ಡ್‌ ಅಕ್ಕಿಯನ್ನು ಉತ್ಪಾದಿಸುತ್ತವೆ. ಈ ಅಕ್ಕಿ ಕರ್ನಾಟಕಕ್ಕೆ ಸೂಕ್ತವಲ್ಲ. ಈ ವರ್ಷದ ಕೊನೆಯಲ್ಲಿ ನಿರೀಕ್ಷಿತ ಪ್ರಮಾಣದ ಭತ್ತದ ಇಳುವರಿ ಬರುತ್ತದೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದರೂ ಆಹಾರ ಸಂಗ್ರಹಣೆ ತಜ್ಞರು ಭತ್ತದ ಇಳುವರಿ ಕುಂಠಿತಗೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಭಾರತೀಯ ಆಹಾರ ನಿಗಮದ ಮಾಜಿ ಅಧ್ಯಕ್ಷ ಡಿವಿ ಪ್ರಸಾದ್‌ ಅವರು, ಈ ವರ್ಷ ಗೋಧಿಯ ಉತ್ಪಾದನೆ ಕೂಡ ಕುಂಠಿತಗೊಳ್ಳುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಗೋಧಿ ಇಳುವರಿ ಭಾಗಶಃ 8 ರಿಂದ 10 ಮಿಲಿಯನ್‌ ಟನ್‌ಗಳಷ್ಟು ಕುಂಠಿತಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ; ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

ಅನಿಯಮಿತ ಮಳೆಯಿಂದ ಸಮಸ್ಯೆ ಆಗಿದೆ. ಕರ್ನಾಟಕದಂತೆ, ಭಾರತದಾದ್ಯಂತ ಮುಂಗಾರು ಮಳೆ ಸಮಸ್ಯೆ ಉಂಟಾಗಿದೆ, ಹೀಗಾಗಿ ಅಕ್ಕಿ ಉತ್ಪಾದನೆಯು ಹಿಂದಿನ ವರ್ಷಗಳ ವಾರ್ಷಿಕ ಸರಾಸರಿಗಿಂತ ಕಡಿಮೆಯಿರುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ. ಭತ್ತವು ಪ್ರಾಥಮಿಕವಾಗಿ ಖಾರಿಫ್ ಬೆಳೆ ಮತ್ತು ಮಳೆಯ ಮೇಲೆ ಅವಲಂಬಿತವಾಗಿದೆ. ಕಡಿಮೆ ಉತ್ಪಾದನೆ ಎಂದರೆ ಬೆಲೆ ಏರುತ್ತದೆ. ಇದು ಕರ್ನಾಟಕದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದರು.

ಕರ್ನಾಟಕವು ದೇಶೀಯ ಅಥವಾ ಅಂತರಾಷ್ಟ್ರೀಯ ಮಾರುಕಟ್ಟೆಯಿಂದ ಖರೀದಿಸುವುದನ್ನು ಆಯ್ಕೆ ಮಾಡಬೇಕಾಗುತ್ತದೆ , ಆದರೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಇದು ಕೂಡ ಸಮಸ್ಯೆ ತಂದೊಡ್ಡುತ್ತಿದೆ.

ಕಾಂಗ್ರೆಸ್ ಸರ್ಕಾರವು ಅಕ್ಕಿಯನ್ನು ಸಂಗ್ರಹಿಸಲು ಮೂಲಗಳನ್ನು ಹುಡುಕುತ್ತಿದೆ ಎಂದು ತಜ್ಞರು ಹೇಳುತ್ತಾರೆ . ಸಂಗ್ರಹಣೆ ಸಮಸ್ಯೆಯನ್ನು ಪರಿಹರಿಸುವಲ್ಲಿ ಗಂಭೀರ ಅಡೆತಡೆಗಳು ಮತ್ತು ನಿರ್ಬಂಧಗಳಿವೆ. ಅಕ್ಕಿಯ ಲಭ್ಯತೆಯು ಸಮಸ್ಯೆಯಾಗದಿದ್ದರೂ, ವೆಚ್ಚವು ಎಫ್‌ಸಿಐ ಬೆಲೆಗಿಂತ ಗಣನೀಯವಾಗಿ ಹೆಚ್ಚಾಗಿರುತ್ತದೆ. ಹೀಗಾಗಿ  ಹಣಕಾಸಿನ ಸವಾಲು ಎದುರಾಗಲಿದೆ.

ಇದನ್ನೂ ಓದಿ: 'ಸಿದ್ದರಾಮಯ್ಯಗೆ ಹಸಿವಿನ ಅನುಭವವಿದೆ; ನನ್ನಂತಹ ಕೋಟ್ಯಂತರ ಬಡವರ ಪಾಲಿಗೆ ಅಕ್ಕಿ ದೇವರು'

ನಗದು ವರ್ಗಾವಣೆ ಯೋಜನೆ:

ರಾಜ್ಯ ಸರ್ಕಾರವು ಅಕ್ಕಿ ಪೂರೈಕೆಗೆ ಬದಲಾಗಿ ನಗದು ವರ್ಗಾವಣೆ ಯೋಜನೆಯನ್ನು ಈಗಾಗಲೇ ಪರಿಚಯಿಸಿದೆ.   ಇದನ್ನು ಮುಂದುವರಿಸುವ ಅಥವಾ ಅಕ್ಕಿ ಬದಲು, ರಾಗಿ ಅಥವಾ ಜೋಳ ನೀಡುವ ಆಯ್ಕೆ ಹೊಂದಿದೆ.

ಆದರೆ ರಾಜ್ಯ ಸರ್ಕಾರ ಈ ಸವಾಲಿಗೆ ಎದೆಗುಂದಲಿಲ್ಲ. ನಾವು ನಮ್ಮ ಭರವಸೆಯನ್ನು ಉಳಿಸಿಕೊಳ್ಳುತ್ತೇವೆ, ನಮಗೆ ಒಂದು ವಾರದ ಸಮಯ ನೀಡಿ, ನಾವು ಅಕ್ಕಿ ಖರೀದಿಸಿ ಅದನ್ನು ತಲುಪಿಸುತ್ತೇವೆ ಎಂದು ಸಚಿನ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಎಲ್ಲ ಬಗೆಯ ಅಕ್ಕಿಗಳ ಬೆಲೆಯಲ್ಲಿ ಶೇ.20ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇಡ್ಲಿ-ದೋಸೆ ಅಕ್ಕಿ ಕೆಜಿಗೆ 30 ರೂ. ಇತ್ತು. ಈಗ ಸಗಟು ದರದಲ್ಲಿ ಕೆಜಿಗೆ 40 ರೂ. ಆಗಿದೆ. ಕಳೆದ ವರ್ಷ ಸೋನಾ ಮಸೂರಿ 40 ರೂ. ಮತ್ತು ಈಗ 54 ರೂ ಆಗಿದೆ ಎಂದು ಎಫ್‌ಕೆಸಿಸಿಐನ ರಮೇಶ್ ಚಂದ್ರ ಲಹೋಟಿ ಹೇಳಿದ್ದಾರೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp