social_icon

ಕಬ್ಬನ್ ಪಾರ್ಕ್‌ನಲ್ಲಿ ಪೊಲೀಸ್ ಸಂಕೀರ್ಣ ನಿರ್ಮಾಣ: ಪಾದಚಾರಿಗಳ ವಿರೋಧ

ಕಸ್ತೂರಬಾ ರಸ್ತೆಯಲ್ಲಿರುವ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತರ ಕಚೇರಿಯ ಪಕ್ಕದಲ್ಲಿ ಪೊಲೀಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Published: 09th September 2023 11:40 AM  |   Last Updated: 09th September 2023 12:17 PM   |  A+A-


People take a walk at Cubbon park in Bengaluru.

ಕಬ್ಬನ್ ಪಾರ್ಕ್‌

Posted By : Manjula VN
Source : The New Indian Express

ಬೆಂಗಳೂರು: ಕಸ್ತೂರಬಾ ರಸ್ತೆಯಲ್ಲಿರುವ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತರ ಕಚೇರಿಯ ಪಕ್ಕದಲ್ಲಿ ಪೊಲೀಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಘದ ಅಧ್ಯಕ್ಷ ಎಸ್ ಉಮೇಶ್ ಅವರು ಮಾತನಾಡಿ, ಕಬ್ಬನ್ ಪಾರ್ಕ್ 190 ಎಕರೆಗಳ ಭೂಮಿಯಲ್ಲಿದ್ದು, ಇದರಲ್ಲಿ ಅನೇಕ ಸಾರ್ವಜನಿಕ ಮತ್ತು ಖಾಸಗಿ ಕಟ್ಟಡಗಳಿವೆ. ಹೊಸ ಕಟ್ಟಡಕ್ಕೆ ವಿರೋಧ ವ್ಯಕ್ತಪಡಿಸದೇ ಹೋದಲ್ಲಿ ಈಗಿರುವ ಪರಿಸರ ನಾಶವಾಗುತ್ತದೆ ಎಂದು ಹೇಳಿದ್ದಾರೆ.

ನಮ್ಮ ಸಂಘವು ಸಮಾನ ವಯಸ್ಕ ಜನರು, ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತದೆ. ಉದ್ಯಾನವನದಲ್ಲಿ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದು,  ಇದರ ವಿರುದ್ಧ ಪ್ರತಿಭಟಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗದ ಹಳೆ ಕಟ್ಟಡದಲ್ಲಿ ಒಂಬತ್ತು ಮಹಡಿಗಳನ್ನು ನಿರ್ಮಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇದೀಗ ಮತ್ತೊಂದು ಪಿಐಎಲ್ ಸಲ್ಲಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಅಸಭ್ಯ ವರ್ತನೆಗೆ ಬ್ರೇಕ್! ತಿಂಡಿ ತಿನಿಸು ಒಯ್ಯುವಂತಿಲ್ಲ: ಇದಕ್ಕೆ ಅಧಿಕಾರಿಗಳು ಏನಂತಾರೆ? ಏನಂತಾರೆ? 

ಈ ನಡುವೆ ಕಬ್ಬನ್ ಪಾರ್ಕ್ ಜಾಗವನ್ನು ಪೊಲೀಸ್ ಠಾಣೆ ಕಾಂಪ್ಲೆಕ್ಸ್ ನಿರ್ಮಿಸಲು ಬಳಸಲಾಗುತ್ತಿದೆ ಎಂಬ ಆರೋಪವನ್ನು ತೋಟಗಾರಿಕಾ ಇಲಾಖೆ ನಿರಾಕರಿಸಿದೆ.

ಬಾಲಭವನ, ವೈಎಂಸಿಎ ಮತ್ತು ಸೆಂಚುರಿ ಕ್ಲಬ್ ಕಬ್ಬನ್ ಪಾರ್ಕ್‌ನ ಮಿತಿಯಲ್ಲಿವೆ, ಆದರೆ, ಪೊಲೀಸ್ ಠಾಣೆಯಂತಹ ಇತರ ಕಟ್ಟಡಗಳು ನಮ್ಮ ಮಿತಿಯಲ್ಲಿಲ್ಲ. ಆದರೆ, ಕಟ್ಟಡದ ನಿಯಮಾವಳಿ ಅವರಿಗೂ ಅನ್ವಯಿಸುತ್ತದೆ. ಯಾವುದೇ ಕಟ್ಟಡವು ವಿಧಾನಸೌಧಕ್ಕಿಂತ ಎತ್ತರವಾಗಿರಬಾರದು. ಬೇಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು’ ಎಂದು ಡಾ.ಎಂ.ಜಗದೀಶ್ ಅವರು ಹೇಳಿದ್ದಾರೆ.

ಈ ಹಿಂದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾತನಾಡಿ, ಪೊಲೀಸರು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಮಂಜೂರಾತಿಯಂತೆಯೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸ ಕಾಂಪ್ಲೆಕ್ಸ್ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp