ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಕಬ್ಬು ತುಂಬಿದ ಲಾರಿ
ಕಬ್ಬು ತುಂಬಿದ ಲಾರಿ
Updated on

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈಟೆನ್ಷನ್ ವಿದ್ಯುತ್ ತಂತಿಯ ಎತ್ತರವನ್ನು ಪರಿಗಣಿಸದೆ ಲಾರಿಗೆ ಕಬ್ಬು ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com